Categories: ಹಾಸನ

ಬೇಲೂರು: ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಾಂಗ್ರೆಸ್-ಜೆಡಿಎಸ್, ಆರೋಪ

ಬೇಲೂರು: ರಾಷ್ಟ್ರ ಪ್ರಧಾನ ಕಾರ್ಯದರ್ಶಿ ವಿರುದ್ಧ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಮೂಲಕ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ತಾಲೂಕು ಯುವ ಮೋರ್ಚ ಅಧ್ಯಕ್ಷ ನವಿಲಹಳ್ಳಿ ಸುಮನ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಪತ್ರಿಕೆಯಲ್ಲಿ ಬಂದಿದೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸುವ ಮೂಲಕ ಲಿಂಗಾಯತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವು ಹಬ್ಬಿಸುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದೆ.

ಒಬ್ಬ ದಕ್ಷ ಪ್ರಾಮಾಣಿಕ ಹಿಂದೂಗಳ ಪರವಾಗಿ ಹೋರಾಟ ಮಾಡುವಂತಹ ವ್ಯಕ್ತಿತ್ವ ಇರುವ ಸಿಟಿ ರವಿ ಅವರ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ಹಾಗೂ ಸಮಾಜಿಕ ಜಾಲತಾಣದಲ್ಲಿ ಇದರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಇದು ಬಿಜೆಪಿ ಪಕ್ಷ ಜಾತ್ಯಾತೀತವಾದ ಪಕ್ಷವಾಹಿದ್ದು ಇಲ್ಲಿ ಎಲ್ಲಾ ಜಾತಿ ಜನಾಂಗದವರು ಸಹ ಕಟ್ಟಿದಂತಹ ಶಿಸ್ತಿನ ಪಕ್ಷವಾಗಿದೆ.

ಬಹುಪಾಲು ವೀರಶೈವರೇ ಹೆಚ್ಚಿನ ಒಲವು ಬಿಜೆಪಿ ಪಕ್ಷದ ಕಡೆ ಇರುವುದರಿಂದ ಹಾಗೂ ನಮ್ಮ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಬೆಳವಣಿಗೆ ಸಹಿಸದೆ ಕೆಲವರು ಈ ರೀತಿ ಷಡ್ಯಂತ್ರ ನಡೆಸುತ್ತಿದ್ದಾರೆ ಇದಕ್ಕೆ ಯಾರೂ ಕೂಡ ಕಿವಿಗೊಡ ಬಾರದು ಎಂದು ಮನವಿ ಮಾಡಿದರು.

ನಾಗೇನಹಳ್ಳಿ ಶಕ್ತಿ ಕೇಂದ್ರದಪ್ರಧಾನ ಕಾರ್ಯದರ್ಶಿ ವಿನಯ್ ಮಾತನಾಡಿ ನಮ್ಮ ತಾಲೂಕು ಮಂಡಳದಲ್ಲಿ ವೀರಶೈವ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅವರ ಮತ ಸೆಳೆಯಲು ಈ ರೀತಿಯಾಗಿ ಎರಡೂ ವಿರೋಧ ಪಕ್ಷಗಳು ಷಡ್ಯಂತ್ರ ರೂಪಿಸಿದೆ.

ಸಿಟಿ ರವಿ ಯವರು ಒಂದು ಜಾತಿಯ ಪರವಾಗಿ ಎಂದೂ ಸಹ ಧ್ವನಿ ಎತ್ತಿದವರಲ್ಲಾ ಎಲ್ಲಾ ಜಾತಿ ಜನಾಂಗದ ಜೊತೆ ಅತ್ಯುತ್ತಮ ಒಡನಾಟ ಇಟ್ಟಿರುವ ಅವರ ವ್ಯಕ್ತಿತ್ವಕ್ಕೆ ಇಂತಹ ಸುಳ್ಳು ಸುದ್ದಿ ಯಿಂದ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.ಇದಕ್ಕೆ ಯಾರೂ ಮಾನ್ಯತೆ ನೀಡಬಾರದು ಎಂದರು.

ಈ ಸಂದರ್ಭದಲ್ಲಿ ಯಮಸಂಧಿ ಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಇದ್ದರು.

Gayathri SG

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

8 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

16 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

32 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

39 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

57 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago