News Karnataka Kannada
Monday, May 13 2024
ಹಾಸನ

ಬೇಲೂರು: ಮಾಜಿ ಸಚಿವರದ್ದೆನ್ನಲಾದ ಆಡಿಯೋಗೆ ತಡೆಯಾಜ್ಞೆ

Kerala tribal youth's murder: 14 found guilty
Photo Credit : News Kannada

ಬೇಲೂರು: ಬೇಲೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವರೊಬ್ಬರದು ಎನ್ನಲಾದ ಆಡಿಯೋ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ತಮ್ಮದು ಎನ್ನಲಾದ ಆಡಿಯೋ ಒಂದು ಒಂದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅದು ತಮ್ಮ ದ್ವನಿ ಅಲ್ಲ , ಆದರೂ ಚುನಾವಣೆ ಸಂದರ್ಭದಲ್ಲಿ ತನಗೆ ಆಗುತ್ತಿರುವ ವೈಯಕ್ತಿಕ ತೇಜೋವಧೆ ನಿಲ್ಲಿಸಲಿ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಆಡಿಯೋ ಪ್ರಾಸಾರ ಮಾಡದಂತೆ ನ್ಯಾಯಾಲಯ ದಿಂದ ತಡೆಯಾಜ್ಞೆ ತಂದಿದ್ದಾರೆ. ಆದಾಗ್ಯೂ ಪ್ರಸಾರ ಮಾಡಿದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಅವರ ಪರ ವಕೀಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಷ್ಟು ದಿನ ಇಲ್ಲದ ಆಡಿಯೋವೊಂದನ್ನು ಚುನಾವಣೆ ಸಂದರ್ಭದಲ್ಲಿ ಹರಿಬಿಟ್ಟಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಇದ್ದು ಇದು ಈ ಸಂದರ್ಭದಲ್ಲಿ ಫಲಿಸುವುದಿಲ್ಲ ಎಂಬುವುದು ಹಿರಿಯ ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.

ಖಾಸಗಿ ಜೀವನದ ಬಗ್ಗೆ ತೇಜೋವಧೆ ಮಾಡುವುದನ್ನು ಬಿಟ್ಟು ನಿಜವಾದ ರಾಜಕೀಯ ಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂಬುವುದು ಹಿರಿಯರ ಅಭಿಪ್ರಾಯವಾಗಿದೆ.

ಸರಳ- ಸಜ್ಜನಿಕೆಯ,ರಾಜಕೀಯವಾಗಿ ಅಪಾರ ಅನುಭವ ಹೊಂದಿರುವವರ ಬೆಳವಣಿಗೆ, ಸಂಘಟನೆಯನ್ನು ಸಹಿಸದ ಕೆಲವರು ಅವರ ಹೆಸರಿನಲ್ಲಿ ಆಡಿಯೋ, ವಿಡಿಯೋಗಳನ್ನು ಹೇಗೆ ಬೇಕು ಹಾಗೆ ಎಡಿಟ್ ಮಾಡಬಹುದು ಇಂತಹ ಸಂದರ್ಭದಲ್ಲಿ ಈ ಬೆಳವಣಿಗೆಯನ್ನು ರಾಜಕೀಯವಾಗಿ ಬಳಸಿ ಕೊಳ್ಳುವುದು ಯಾರಿಗೂ ಶೋಭೆ ತರುವುದಿಲ್ಲ ಎಂಬುವುದು ಎಲ್ಲರ ಅಭಿಪ್ರಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು