ಬೇಲೂರು: ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮಗು ಸೇರಿದಂತೆ ಮೂವರು ಪ್ರಾಣಪಾಯ ದಿಂದ ಪಾರಾಗಿರುವ ಘಟನೆ ಬೇಲೂರು ತಾಲ್ಲೂಕು ನಾಗೆನಹಳ್ಳಿಯಲ್ಲಿ ನಡೆದಿದೆ.
ಶೇಕ್ ಅಲಿ ಎಂಬುವವರ ಮನೆ ಮದ್ಯರಾತ್ರಿ ಸ್ಪೋಟ ಗೊಂಡಿದೆ. ಗ್ಯಾಸ್ ವಾಸನೆಗೆ ಎಚ್ಚೆತ್ತ ದಂಪತಿ ಮನೆಯಿಂದ ಹೊರಗೆ ಓಡಿ ಬಂದರು. ಅವರು ಹೊರಗೆ ಓಡಿ ಬರುತ್ತಿದ್ದಂತೆಯೇ ಮನೆಯ ಒಳಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ಸಂಪೂರ್ಣ ಹಾನಿಯಾಗಿದೆ. ಆಗ ಆಸುಪಾಸಿನ ಮನೆಯವರೆಲ್ಲ ಓಡಿಬಂದರು.
ಬೆಂಕಿ ಅಕ್ಕಪಕ್ಕದ ಮನೆಗೆ ವ್ಯಾಪಿಸದಂತೆ ನೀರು, ಮರಳು ಎರಚಿ ಬೆಂಕಿ ನಂದಿಸಲಾ ಯಿತು. ಗ್ರಾ.ಪಂ. ಸದಸ್ಯ ಹರೀಶ್ ಹಾಗೂ ಸ್ನೇಹಿತರು ಈ ಕಾರ್ಯಾಚರಣೆಯಲ್ಲಿ ಮುಂಚೂಣಿಯಲಿ ದ್ದರು. ನಂತರ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಆಗುತ್ತಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು