ಹಾಸನ

ಬೇಲೂರು: ಲಕ್ಷಾಂತರ ಮೌಲ್ಯದ ಗಿಫ್ಟ್ ವಸ್ತುಗಳು ವಶ

ಬೇಲೂರು: ಬೇಲೂರು ತಹಸೀಲ್ದಾರ್ ಹಾಗೂ ಪೊಲೀಸರು ದಾಳಿ ನಡೆಸಿ ಮತದಾರರಿಗೆ ಹಂಚಲು ತಂದಿದ್ದ ಲಕ್ಷಾಂತರ ರೂ ಮೌಲ್ಯದ ಗಿಫ್ಟ್ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ನಡೆದಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹುಲ್ಲಹಳ್ಳಿ ಸುರೇಶ್ ಹಳೇಬೀಡಿನಲ್ಲಿ ಎರಡು ದಿನಗಳ ಕಾಲ ಮಹಾರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಹಿಳೆಯರಿಗೆ ಹಂಚಲು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಹಿಂಭಾಗದ ಮನೆಯೊಂದರಲ್ಲಿ ಗಿಫ್ಟ್ ವಸ್ತುಗಳನ್ನು ಸಂಗ್ರಹಿಸಿದ್ದರು ಎನ್ನಲಾಗಿದೆ.

ಎಲ್ಲಾ ವಸ್ತುಗಳ ಮೇಲೆ ಹುಲ್ಲಹಳ್ಳಿ ಸುರೇಶ್ ಹೆಸರಿರುವ ಸ್ಟಿಕ್ಕರ್ ಇದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೇಲೂರು ತಹಸೀಲ್ದಾರ್ ಮಮತಾ, ಇನ್ಸ್‌ಪೆಕ್ಟರ್ ಶ್ರೀಕಾಂತ್ ಹಾಗೂ ಪೊಲೀಸರ ತಂಡ ಮನೆಯಲ್ಲಿಟ್ಟಿದ್ದ ಬೆಳ್ಳಿದೀಪಗಳು, ಸ್ಟೀಲ್ ಬಾಕ್ಸ್‌ಗಳು, ಗಿಫ್ಟ್ ವಸ್ತುಗಳು, ಬೆಳ್ಳಿ ದೀಪ ಇತ್ಯಾದಿ ವಸ್ತುಗಳು ವಶಕ್ಕೆ ಪಡೆದಿದ್ದು, ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

5 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

15 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

26 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

45 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

50 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

59 mins ago