ಬೇಲೂರು: ತಾಲೂಕಿನ ಅರೇಹಳ್ಳಿ ಜಿಲ್ಲಾಪಂಚಾಯತಿ ವ್ಯಾಪ್ತಿಯ ಬಿಕ್ಕೋಡಿನಲ್ಲಿ ನೂತನ ಶಾಸಕ ಹೆಚ್ ಕೆ ಸುರೇಶ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.
ಈ ವೇಳೆ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹೆಚ್ ಕೆ ಸುರೇಶ್ ೫ ವರ್ಷಗಳ ಕಾಲ ಹಿಂದಿನ ಶಾಸಕರು ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ತಾಲೂಕಿನ ಜನತೆಗೆ ತಿಳಿದಿದೆ.ಮುಂದಿನ ೫ ವರ್ಷಗಳಲ್ಲಿ ನಿಮ್ಮ ಮನೆಯ ಮಗನ ಗುಣಮಟ್ಟದ ಕೆಲಸವನ್ನು ನೀವುಗಳು ನೋಡುತ್ತೀರಿ. ತಾಲೂಕಿನ ಕ್ಷೇತ್ರವನ್ನು ೨೨೪ ಕ್ಷೇತ್ರಗಳಿಗಿಂತ ವಿಭಿನ್ನವಾಗಿ ಅಭಿವೃದ್ಧಿ ಮಾಡುವುದೇ ನನ್ನ ಮೊದಲ ಗುರಿ.ತಾಲೂಕಿನಲ್ಲಿ ಜನಸಾಮಾನ್ಯರ ಮೇಲೆ ಎಲ್ಲಾ ಇಲಾಖೆಗಳಿಂದ ಅಗುತ್ತಿರುವ ದೌರ್ಜನ್ಯ ತಡೆಗಟ್ಟುವುದುರ ಜೊತೆಗೆ ಮೊದಲ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನೀಡುವುದು ನನ್ನ ಮೊದಲ ಆದ್ಯತೆ ಎಂದರು.
ನಿಮ್ಮ ಯಾವುದೇ ಕೆಲಸ ಕಾರ್ಯ ಇದ್ದರೂ ನೇರವಾಗಿ ನನ್ನ ಬಳಿಗೆ ಬನ್ನಿ, ೨೪ ಗಂಟೆಗಳ ಕಾಲ ನಾನು ನಿಮ್ಮ ಸೇವೆ ಮಾಡಲು ಸಿದ್ಧ.ರಾಜ್ಯದಲ್ಲಿ ನಮ್ಮ ಸರ್ಕಾರ ಇಲ್ಲಾ,ಆದರೂ ತಾಲೂಕಿನ ಅಭಿವೃದ್ಧಿ ಗೆ ಯಾವರೀತಿ ಅನುದಾನ ತರಬೇಕು ಎಂದು ನನಗೆ ತಿಳಿದಿದ್ದು ಅದನ್ನು ತಂದು ಅಭಿವೃದ್ಧಿ ಪಡಿಸಲಾಗುವುದು.ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದ್ದು ಮುಂದೆಯೂ ಸಹ ನಮ್ಮದೇ ಸರ್ಕಾರ ಬರುವುದರಿಂದ ಅಭಿವೃದ್ಧಿಯೊಂದೇ ನಮ್ಮೆಲ್ಲರ ಮೂಲ ಮಂತ್ರವಾಗಿರಬೇಕು. ಗುತ್ತಿ ಗೆದಾರರು ಸರ್ಕಾರದ ಕೆಲಸ ದೇವರ ಕೆಲಸವೆಂದು ಮಾಡಬೇಕು.ಇಲ್ಲಿ ಯಾವುದೇ ಲೋಪವೆಸಗಿದ್ದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಜಿಲ್ಲಾ ವಕ್ತಾರ ಅಮಿತ್ ಶೆಟ್ಟಿ,ಜಿಲ್ಲಾ ಉಪಾಧ್ಯಕ್ಷ ಚಂದ್ರಕಲಾ ಇತರರು ಇದ್ದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…