Categories: ಹಾಸನ

ಬೇಲೂರು: ಪುಷ್ಪಗಿರಿ ಮಹಿಳಾ ಸಂಘದಿಂದ ಉಪ್ಪಿನಕಾಯಿ ಉತ್ಪನ್ನ ಬಿಡುಗಡೆ

ಬೇಲೂರು: ಪುಷ್ಪಗಿರಿ ಮಹಾಸಂಸ್ಥಾನ ಶ್ರೀ ಮಠದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸಂಘದಿಂದ ರೂಪಿತ ವಾದ ಮಾವಿನಕಾಯಿ ಉಪ್ಪಿನಕಾಯಿ ಉತ್ಪನ್ನವನ್ನು ಬೇಲೂರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದ ಬಳಿ ಮಹಿಳಾ ಸಂಘದ ಪದಾಧಿ ಕಾರಿಗಳು, ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿಗಳು ಹಾಗೂ ಸದಸ್ಯರು ಬಿಡುಗಡೆ ಮಾಡಿ ಮಾರಾಟ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾ ರರೊಂದಿಗೆ ಮಾತನಾಡಿದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ವಿನು ತಧನಂಜಯ್, ಮಹಿಳೆಯರ ಸಮಗ್ರ ಸಬಲೀಕರಣದ ದೃಷ್ಟಿಯಿಂದ ಪರಮಪೂಜ್ಯ ಜಗದ್ಗುರುಗಳಾದ   ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ೨೦೨೦ ರಲ್ಲಿ ಪುಷ್ಪಗಿರಿ ಗ್ರಾಮೀ ಣಾಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಅಂದಿನಿಂದ ಇಂದಿನವರೆಗೂ ರಾಜ್ಯದ ಹತ್ತು ಜಿಲ್ಲೆಯಲ್ಲಿ ಸಾವಿರಾರು ಮಹಿಳಾ ಸ್ವ ಸಹಾಯ ಸಂಘ ಸ್ಥಾಪಿಸಿದ್ದು, ಮಹಿಳೆಯ ಅಭಿವೃದ್ಧಿಗೆ ಹತ್ತಾರು ಯೋಜನೆ ರೂಪಿಸಲಾಗಿದೆ. ಪೂಜ್ಯರ ಮಾರ್ಗದರ್ಶನದಂತೆ ಕೇವಲ ಹಣಕಾಸಿಗೆ ಸೀಮಿತ ವಾದ ಸಂಸ್ಥೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಪರಿಸರ, ಸಾಂಸ್ಕೃತಿಕ ಹತ್ತಾರು ಕ್ಷೇತ್ರದಲ್ಲಿ ಅದ್ವಿತೀಯ ಕೆಲಸ ಮಾಡುತ್ತಿದೆ.

ವಿಶೇಷವಾಗಿ ಗ್ರಾಮೀಣರು ಪಟ್ಟಣಕ್ಕೆ ವಲಸೆಯನ್ನು ತಡೆಯ ಲು ಸ್ವ ಉದ್ಯೋಗ ಪರಿಕಲ್ಪನೆ ಯಲ್ಲಿ ಸಣ್ಣ ಸಣ್ಣ ಗುಡಿಕೈಗಾರಿಕೆಗೆ ಉತ್ತೇಜನ ಜೊತೆಗೆ ಆರ್ಥಿಕ ಸಹಾಯ ಮತ್ತು ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ಈಗಾಗಲೇ ಉತ್ತರ ಕರ್ನಾಟಕ ಭಾಗದ ಪುಷ್ಪಗಿರಿ ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ವಿದ್ಯುತ್ ದೀಪ ವನ್ನು ತಯಾರಿಕೆ ಮಾಡಿದ್ದು, ಸ್ವತಃ ಮುಖ್ಯಮಂತ್ರಿಗಳು ಬಿಡುಗಡೆ ನಡೆಸಿ ಪೂಜ್ಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇನ್ನೂ ಮಲೆನಾಡು ಭಾಗದ ಅರೇಹಳ್ಳಿ ಮಹಿಳಾ ಸ್ವ ಸಹಾಯ ಸಂಘದವರು ಗುಣ ಮಟ್ಟದಿಂದ ಕೂಡಿದ ಕಾಫಿಪುಡಿ ತಯಾರಿಸಿ ಮಾರಾಟ ನಡೆಸಿ ಜನ ಮೆಚ್ಚುಗೆ ಪಡೆದಿದ್ದಾರೆ. ಅಂತಯೇ ಉತ್ತರ ಕರ್ನಾಟಕ ಭಾಗದಲ್ಲಿನ ಖಡಕ್ ಮಾವಿ ನಕಾಯಿ ಉಪ್ಪಿನಕಾಯಿಯನ್ನು ತಯಾರಿಸಿದ್ದು, ಈ ಬೇಲೂರು ಭಾಗದಲ್ಲಿ ಪೂಜ್ಯರ ಮಾರ್ಗ ದರ್ಶನದಲ್ಲಿ ಇಂದು ಬಿಡುಗಡೆ ಮತ್ತು ಮಾರಾಟ ನಡೆಲಾಗಿದೆ. ಪ್ರತಿ ಮಹಿಳೆಯರು ಒಂದಾಲ್ಲ ಒಂದು ಸ್ವ ಉದ್ಯೋಗ ನಡೆಸಲು ಮುಕ್ತ ಅವಕಾಶ ಇರುವ ಕಾರಣ ದಿಂದ ಗುಡಿ ಕೈಗಾರಿಕೆ ನಡೆಸಲು ಮುಂದಾಗಿ ಕುಟುಂಬದ ನಿರ್ವಹಣೆ ಜೊತೆಗೆ ಹತ್ತಾರು ನಿರುದ್ಯೋಗಿಗಳಿಗೆ ಕೆಲಸ ನೀಡುವ ಕಡೆ ಮುಂದಾಗಬೇಕಿದೆ ಎಂದು ತಿಳಿಸಿದರು.

ಬೇಲೂರು ಪುಷ್ಪಗಿರಿ ಮಹಿಳಾ ಸಂಘದ ಪ್ರತಿನಿಧಿ ವಿಜಯಲಕ್ಷ್ಮಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಸಾವಿ ರಾರು ಮಠಗಳಿದ್ದು ಅವುಗಳು ದಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಪುಷ್ಪಗಿರಿ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾ ರ್ಯ ಮಹಾಸ್ವಾಮಿಗಳು ವಿಭಿನ್ನ ಎಂಬಂತೆ ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಮಹಿಳಾ ಸಬಲೀ ಕರಣಕ್ಕೆ ಮುಂದಾಗಿರುವುದು ನಿಜಕ್ಕೂ ಅಗಮ್ಯವಾಗಿದೆ. ಪೂಜ್ಯರ ಸಾಧನೆ ಈಗಾಗಲೇ ರಾಜ್ಯ.ರಾಷ್ಟ್ರ ಮತ್ತು ಅಂತರಾ ಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದು ಪುಷ್ಪಗಿರಿ ಮಠ ನಾಡಿನಲ್ಲೆಡೆ ಬೆಳಗಿದೆ. ಮುಂದಿನ ದಿನದಂದು ಕುಟುಂಬಗಳಿಗೆ ಅಗತ್ಯ ಇರುವ ವಸ್ತುಗಳನ್ನು ತಯಾರಿಸುವ ಕಡೆ ಒಲವು ಹೊಂದಿದ್ದು ಪೂಜ್ಯರ ಆಶೀ ರ್ವಾದ ಇರಲಿ ಎಂದರು.

ಈ ಸಂದರ್ಭದಲ್ಲಿ ಬೇಲೂರು ಪುಷ್ಪಗಿರಿ ಮಹಿಳಾ ಸಂಘದ ಪದಾಧಿಕಾರಿಗಳಾದ ದ್ರಾಕ್ಷಯಿಣಿ, ಗೀತಾ, ವನಜಾಕ್ಷಿ, ಮೀನಾಕ್ಷಿ, ವೀಣಾ, ರೇಣುಕಾ, ವನಜಾಕ್ಷಿ, ಅಲ್ಪಯಾ ಇನ್ನೂ ಮುಂತಾದವರು ಹಾಜರಿದ್ದರು

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago