ಬೇಲೂರು: ನಾಯಕ ಸರಿಯಾಗಿ ಆಡಳಿತ ಮಾಡಿದರೆ ಮಾತ್ರವೇ ಆ ಭಾಗದ ಜನತೆ ಸುಖ ಸಮೃದ್ಧತೆಯಿಂದ ಇರುವುದಕ್ಕೆ ಸಾಧ್ಯ. ನಾಯಕನ ಆಡಳಿತವೇ ಸರಿಯಾಗಿಲ್ಲದಿದ್ದರೆ ಆ ಪ್ರದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಬೇಲೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ಖಂಡಿತವಾಗಿಯೂ ಬೇಲೂರು ವಿಧಾನ ಸಭಾ ಕ್ಷೇತ್ರ ಅಭಿವೃದ್ಧಿಆಗಲಿದೆ ಎಂದು ಬೇಲೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಕೆ ಸುರೇಶ್ ಹೇಳಿದರು.
ತಾಲೂಕಿನ ಮೊಸಗಸಾವರದಲ್ಲಿ ಮತಯಾಚಿಸಿ ಮಾತನಾಡಿದ ಅವರು, ವಿಧಾನ ಸಭಾ ಕ್ಷೇತ್ರಗಳ ಪೈಕಿ ಬೇಲೂರು ವಿಧಾನ ಸಭಾ ಕ್ಷೇತ್ರ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಒಂದು ಕಾಲದಲ್ಲಿ ಮೆರೆದ ಪ್ರದೇಶ ಈಗ ಈ ಸ್ಥಿತಿಯಲ್ಲಿರುವುದು ಶೋಚನೀಯ. ಈ ಭಾಗ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುವ ಕಾಲ ಸನಿಹದಲ್ಲಿದೆ. ನೀವೆಲ್ಲ ಈ ಬಾರಿ ಭಾರತೀಯ ಜನತಾ ಪಾರ್ಟಿಗೆ ಬೆಂಬಲವನ್ನು ಸೂಚಿಸಿ ನನ್ನನ್ನು ಗೆಲ್ಲಿಸಿದರೆ ನೀವು ಗೆದ್ದಂತೆ ಎಂದರು.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿ ವೈ ವಿಜಯೇಂದ್ರ ಅವರು ಈ ಕ್ಷೇತ್ರಕ್ಕೆ ಬಂದಾಗ ಹೆಚ್.ಕೆ ಸುರೇಶ್ ಗೆದ್ದರೆ ನಾವು ಗೆದ್ದಂತೆ ಮತ್ತು ನೀವೆಲ್ಲರೂ ಗೆದ್ದಂತೆ ಎಂದು ಹೇಳಿದ್ದರು. ಕಾಲ ಇನ್ನೂ ಮಿಂಚಿಲ್ಲ, ಭಾರತೀಯ ಜನತಾ ಪಾರ್ಟಿಗೆ ಮತ ಹಾಕುವುದರ ಮೂಲಕ ಬೇಲೂರಿನ ಹಾಗೂ ದೇಶದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸೋಣ ಎಂದು ಹೇಳಿದರು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.