ಹಾಸನ: ಹಾಸನದಲ್ಲಿ ನಡೆದ ತಾಯಿ, ಇಬ್ಬರು ಮಕ್ಕಳ ಸಾವು ಪ್ರಕರಣ ಸತ್ಯತೆ ಈಗ ಬಯಲಾಗಿದೆ. ಪತಿ ಇಲ್ಲದ ವೇಳೆ ಮನೆಗೆ ಬಂದಿದ್ದ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ ಎಂಬ ವ್ಯಕ್ತಿ ಹಣಕ್ಕಾಗಿ ಶಿವಮ್ಮನನ್ನು ಪೀಡಿಸಿ ಆಕೆ ಹಣ ನೀಡಲು ನಿರಾಕರಿಸಿದಾಗ ಶಿವಮ್ಮ, ಮಕ್ಕಳಾದ ಪವನ್(10), ಸಿಂಚನಾ(8) ಹತ್ಯೆ ಮಾಡಿ ಪರಾರಿಯಾಗಿದ್ದ.
ಇದೀಗ ಆರೋಪಿಯನ್ನು ಪೆನ್ಷನ್ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ: ಹೊಸ ವರ್ಷದ ಮೊದಲ ದಿನದಂದೇ ಹಾಸನ ಹೊರವಲಯದ ದಾಸರಕೊಪ್ಪಲಿನ ಮನೆಯೊಂದರಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಿಗೂಡ ರೀತಿಯಲ್ಲಿ ಮೃತಪಟ್ಟಿದ್ದರು. ಬೇಕರಿ ಕೆಲಸಕ್ಕೆ ತುಮಕೂರಿಗೆ ಹೋಗಿದ್ದ ಪತಿ ಮನೆಗೆ ಬಂದು ನೋಡಿದಾಗ ಘಟನೆ ಬಯಲಾಗಿತ್ತು. ಪ್ರಕರಣದಲ್ಲಿ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.