ಚನ್ನರಾಯಪಟ್ಟಣ: ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾದ ಶ್ವೇತಾ ಯಾದವ್ ರವರನ್ನು ಜಾತ್ಯತೀತ ಜನತಾದಳದ ಪಕ್ಷದ ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದಾರೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು ಜೆಡಿಎಸ್ ಪಕ್ಷದ ಮಾಧ್ಯಮ ಸಂಯೋಜಕರಾದ ಕೆ.ಟಿ.ಶ್ರೀಕಂಠೆಗೌಡ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ ಅವರಿಗೆ ಧನ್ಯವಾದ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶ್ವೇತಾ ಯಾದವ್ ನನ್ನ ಮೇಲೆ ವಿಶ್ವಾಸವಿಟ್ಟು ಜೆಡಿಎಸ್ ಪಕ್ಷದ ರಾಜ್ಯ ವಕ್ತರಾಗಿ ಆಯ್ಕೆ ಮಾಡಿದ ಜೆಡಿಎಸ್ ಪಕ್ಷದ ಮುಖಂಡರಿಗೆ ನನ್ನಧನ್ಯವಾದಗಳು, ನನ್ನ ಮೇಲೆ ವಿಶ್ವಾಸ ಮತ್ತು ನಂಬಿಕೆ ಇಟ್ಟು ಜವಾಬ್ದಾರಿ ವಹಿಸಿರುವ ಜೆಡಿಎಸ್ ಪಕ್ಷದ ಮುಖಂಡರ ವಿಶ್ವಾಸವನ್ನು ಉಳಿಸಿಕೊಂಡು ಜೆಡಿಎಸ್ ಪಕ್ಷವನ್ನು ಭದ್ರವಾಗಿ ಕಟ್ಟುವಲ್ಲಿ ರಾಜ್ಯದ್ಯಂತ ಪ್ರವಾಸ ಮಾಡುತ್ತೇನೆ ಮತ್ತು ಜೆಡಿಎಸ್ ಪಕ್ಷದ ಸಂಘಟನೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.