ಹಾಸನ: ವಿದ್ಯುತ್ ಶಾರ್ಟ್ ಸರ್ಕೀಟ್ ನಿಂದ ಕಾಫಿ ತೋಟ ನಾಶ

ಹಾಸನ: ಕಾಫಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ಕಂಬದಲ್ಲಿ ಉಂಟಾದ ಶಾರ್ಟ್ ಸರ್ಕೀಟ್ ನಿಂದಾಗಿ  ಎರಡೂವರೆ ಎಕರೆಯಷ್ಟು ಕಾಫಿ ತೋಟ ಸುಟ್ಟು ನಾಶವಾದ ಘಟನೆ ಜಿಲ್ಲೆಯ ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಪುರ ಭೈರವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಲಕ್ಷ್ಮೇಗೌಡರ ಮಕ್ಕಳಾದ ರಾಜಕುಮಾರ್ ಮತ್ತು ಸಣ್ಣಪ್ಪ ಅವರಿಗೆ ಸೇರಿದ ಎರಡೂವರೆ ಎಕರೆ ಕಾಫಿ ತೋಟ ಸಂಪೂರ್ಣವಾಗಿ ನಾಶವಾಗಿದ್ದು, ಕಾಫಿ ತೋಟವನ್ನು ನಂಬಿ ಜೀವನ ಮಾಡುತ್ತಿದ್ದ ಕುಟುಂಬ ಈಗ ಕಂಗಾಲಾಗಿದ್ದು, ಮುಂದೆ ಜೀವನ ಹೇಗೆ ಎಂಬ ಚಿಂತೆಯಲ್ಲಿ ಕಾಲ ಕಳೆಯುವಂತಾಗಿದೆ.

ರಾಜಕುಮಾರ್ ಮತ್ತು ಸಣ್ಣಪ್ಪ ಅವರಿಗೆ ಒಟ್ಟು ಮೂರೂವರೆ ಎಕರೆ ಜಮೀನು ಇದ್ದು ಇದರಲ್ಲಿ ಸುಮಾರು ಎರಡೂವರೆ ಎಕರೆ ಪ್ರದೇಶದಲ್ಲಿ ಅರೇಬಿಕಾ ಕಾಫಿಯನ್ನು ಬೆಳೆಯಲಾಗಿತ್ತು. ಕಾಫಿಗಿಡಗಳು ಫಸಲು ನೀಡುತ್ತಿದ್ದವು. ಈ ನಡುವೆ ಕಾಫಿ ತೋಟದ ಮಧ್ಯೆ ಹಾದು ಹೋಗಿದ್ದ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕೀಟ್ ಆದ ಕಾರಣ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ ಎರಡೂವರೆ ಎಕರೆಯಷ್ಟು ಕಾಫಿ ತೋಟವು ಸಂಪೂರ್ಣ ಸುಟ್ಟು ಹೋಗಿದೆ. ಇದೀಗ ಫಸಲು ನೀಡುತ್ತಿದ್ದ ಕಾಫಿ ತೋಟವನ್ನು ಕಳೆದುಕೊಂಡಿರುವ ಕುಟುಂಬ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದೆ.

ನೊಂದ ಕಾಫಿ ಬೆಳಗಾರರ ಸಹಾಯಕ್ಕೆ ಬಂದಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನದ ಕಾರ್ಯದರ್ಶಿ ಶಬ್ಬೀರ್ ಅಹಮದ್ ಅವರು ಮಾತನಾಡಿ ಅತಿ ಸಣ್ಣ ಹಿಡುವಳಿದಾರರಾದ ರಾಜಕುಮಾರ್ ಮತ್ತು ಸಣ್ಣಪ್ಪ ಅವರಿಗೆ ಈ ಘಟನೆಯಿಂದ ಅಪಾರ ನಷ್ಟವಾಗಿದ್ದು, ಕೂಡಲೇ ತಾಲೂಕಿನ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆಗಿರುವ ನಷ್ಟವನ್ನು ಅಂದಾಜು ಮಾಡಿ ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

Sneha Gowda

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

6 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

10 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

24 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

39 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

47 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago