ಆಲೂರು : ಬಡವರು, ರೈತರ ಹಿತ ಕಾಪಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಜಿಲ್ಲೆ ಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ನೀಡಿದರು.
ಜಿಲ್ಲೆಯ ಆಲೂರಿನಲ್ಲಿ ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಧಾನಿ ಹುದ್ದೆ ಅಲಂಕರಿಸಲು ಕಾಂಗ್ರೆಸ್ ಸಹಕಾರ ನೀಡಿತು ಎಂದು ನೆನಪಿಸಿದರು. ಪ್ರತಿಯೊಬ್ಬರಿಗೂ ಅನ್ನ ಭಾಗ್ಯದ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ದಿನನಿತ್ಯದ ಆಹಾರದ ಕೊರತೆಯನ್ನು ನೀಗಿಸಿದ ಕಾಂಗ್ರೆಸ್ ಪಕ್ಷ ಉತ್ತಮ ಆಡಳಿತವನ್ನು ನೀಡಿದೆ.
ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವ ಸಲುವಾಗಿ ಎಲ್ಲರೂ ಹೋರಾಟ ಮಾಡಬೇಕು ಇತಿಹಾಸ ಸೃಷ್ಟಿಸಬೇಕಿದೆ ಎಂದರು.
ಸಕಲೇಶಪುರ -ಆಲೂರು ವಿಧಾನಸಭಾ ಕ್ಷೇತ್ರದಲ್ಲಿ ಮುರಳಿ ಮೋಹನ್ ,ಸಣ್ಣ ಸ್ವಾಮಿ, ಡಿ. ಮಲ್ಲೇಶ್, ಭುವನಾಕ್ಷಿ ನಾಲ್ಕು ಮಂದಿ ಅರ್ಜಿಯನ್ನು ಸಲ್ಲಿಸಿದ್ದು ಇವರಲ್ಲಿ ಯಾರಿಗೆ ಟಿಕೆಟ್ ನೀಡಿದರು ಕ್ಷೇತ್ರದ ಜನ ಮತ ನೀಡಬೇಕು ಕಾಂಗ್ರೆಸ್ ನ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಸಮಾರಂಭಕ್ಕೂ ಮುನ್ನಾ ಪ್ರಜಾಧ್ವನಿ ಯಾತ್ರೆಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ ಡಿ.ಕೆ ಶಿವಕುಮಾರ್ ಹಾಗೂ ತಂಡ ನೂರಾರು ಮಂದಿ ಬೆಂಬಲಿ ಗರೊಂದಿಗೆ ಸಾಗಿದರು ಅಭಿ ಮಾನಿಗಳು ಡಿ.ಕೆ ಶಿವಕುಮಾರ್ ಅವರಿಗೆ ಸೇಬಿನ ಹಾರ ಹಾಗೂ ಪುಷ್ಪಾರ್ಚನೆಯೊಂದಿಗೆ ಅದ್ದೂರಿ ಸ್ವಾಗತ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಿಧಾನಸಭೆ ವಿರೋಧ ಪಕ್ಷದ ಉಪನಾ ಯಕ ಯು.ಟಿ. ಖಾದರ್, ಸಂಸದ ಡಿ ಕೆ ಸುರೇಶ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮಾಜಿ ಸಚಿವರಾದ ಎಚ್ ಎಂ ರೇವಣ್ಣ, ಮೋಟಮ್ಮ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಡಿಸಿಸಿ ಅಧ್ಯಕ್ಷ ಲಕ್ಷ್ಮಣ್, ಮುಖಂ ಚಂದ್ರಶೇಖರ್ , ಮುರಳಿ ಮೋಹನ್,ಸಣ್ಣ ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.