ಹಾಸನ: ಓರ್ವ ಕಾನ್ಸ್ಟೇಬಲ್ ಸಕಲೇಶಪುರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ಕಾನ್ಸ್ಟೇಬಲ್ ಸೋಮಶೇಖರ್ (39) ಎಂದು ತಿಳಿದು ಬಂದಿದೆ. ಇವರು ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಊಹಿಸಲಾಗಿದೆ.
ಈ ಪ್ರಕರಣ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.