ಬಾಗೂರು(ನುಗ್ಗೇಹಳ್ಳಿ): ಕೆಂಬಾಳು ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಯೋಜನೆ ಮೂಲಕ ಪ್ರೌಢಶಾಲೆ ಆವರಣದಲ್ಲಿ 21 ಲಕ್ಷ ವೆಚ್ಚದಲ್ಲಿ ಸುಸರ್ಜಿತ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿಎನ್ ಬಾಲಕೃಷ್ಣ ತಿಳಿಸಿದರು.
ಹೋಬಳಿಯ ಕೆಂಬಾಳು ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಯೋಜನೆ ಮೂಲಕ ಪ್ರೌಢಶಾಲೆ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.
ಅತಿ ಕಡಿಮೆ ವೆಚ್ಚದಲ್ಲಿ ಸುಸರ್ಜಿತ ಕ್ರೀಡಾಂಗಣವನ್ನು ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗಿದ್ದು ಕ್ರೀಡಾಂಗಣ ಇಡೀ ತಾಲೂಕಿಗೆ ಮಾದರಿಯಾಗಿದೆ ಪ್ರತಿ ಗ್ರಾಮ ಪಂಚಾಯತಿ ವತಿಯಿಂದ ಇದೇ ಮಾದರಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಬೇಕು ನೂತನ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೋಕೋ ಕೋರ್ಟ್. ವಾಲಿಬಾಲ್ ಕೋರ್ಟ್. ರನ್ನಿಂಗ್ ರೈಸ್ ಲೈವ್. ಸೇರಿದಂತೆ ವಿವಿಧ ಕ್ರೀಡೆಗಳಿಗೆ ಪ್ರತ್ಯೇಕವಾಗಿ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗಿದೆ. ಕ್ರೀಡಾಂಗಣ ಕೇವಲ ತಾಲೂಕಿಗಲ್ಲದೆ ಇಡೀ ಜಿಲ್ಲೆಗೆ ಮಾದರಿಯಾಗಿದೆ ಎಂದರು ಮಕ್ಕಳಿಗೆ ಬೋಧನೆ ಜೊತೆಗೆ ಆಟೋಟ ಸ್ಪರ್ಧೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಗ್ರಾಮೀಣ ಯುವ ಪ್ರತಿಭೆಗಳು ಭವಿಷ್ಯದಲ್ಲಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ ಕೆಂಬಾಳು ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಯೋಜನೆಯ ಮೂಲಕ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ರಸ್ತೆ ಕುಡಿಯುವ ನೀರು ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಕೆಂಬಾಳು ಗ್ರಾಮ ಪಂಚಾಯಿತಿ ತಾಲೂಕಿನ ಗಡಿಭಾಗದಲ್ಲಿದ್ದು ಕ್ಷೇತ್ರದ ಶಾಸಕನಾಗಿ ಹೆಚ್ಚಿನ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ ಈ ಭಾಗದ ಕೆರೆಗಳನ್ನು ತುಂಬಿಸುವ ಸಲುವಾಗಿ ಕಲ್ಲೇ ಸೋಮನಹಳ್ಳಿ ಏತ ನೀರಾವರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದ್ದು ಪೂರ್ಣಗೊಂಡ ನಂತರ ಈ ಭಾಗದ ಕೆರೆಗಳಿಗೆ ನೀರು ಹರಿಸಲಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಯಮುನಾ ರವಿಕುಮಾರ್, ಉಪಾಧ್ಯಕ್ಷ ಮಮತಾ. ಗ್ರಾಪಂ ಮಾಜಿ ಅಧ್ಯಕ್ಷ ಪುಷ್ಪ ಜಯರಾಮ್, ಮುಖಂಡರುಗಳಾದ ಬಾಗೂರು ಶಿವಣ್ಣ, ವಳಗೇರಳ್ಳಿ ಮಂಜಣ್ಣ, ಓಬಳಾಪುರ ಬಸವರಾಜು, ಜಯರಾಮು, ಮಂಜುನಾಥ್, ಶ್ರೀನಿವಾಸ್, ನಾಗಣ್ಣ, ನಾಗರಾಜು, ಕೆಂಪೇಗೌಡ್ರು ಚಂದ್ರಣ್ಣ, ಪ್ರೌಢಶಾಲೆ ಮುಖ್ಯ ಶಿಕ್ಷಕ ನಂದೀಶ್, ಪ್ರಾಥಮಿಕ ಶಾಲೆ, ಮುಖ್ಯ ಶಿಕ್ಷಕ ಅಂಜನಮೂರ್ತಿ, ಸೇರಿದಂತೆ ಅನೇಕರು ಹಾಜರಿದ್ದರು.