News Karnataka Kannada
Friday, May 03 2024
ಹಾಸನ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ ಸಿ.ಟಿ.ರವಿ

CT Ravi congratulates Vijayendra on being elected as BJP state president
Photo Credit : News Kannada

ಹಾಸನ: ಪಕ್ಷದಲ್ಲಿ ಇರುವವರನ್ನೇ ಸಮಾಧಾನವಾಗಿ- ಇಟ್ಟುಕೊಳ್ಳಲು ಆಗದವರು ಪಕ್ಷಕ್ಕೆ ಕರೆದುಕೊಂಡವರಿಗೆ ಏನು ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಅವರು ಶನಿವಾರ(ನ.11)ರಂದು ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನ.15ರ ಬಳಿಕ ಬೇರೆ ಪಕ್ಷದಿಂದ ಕಾಂಗ್ರೆಸ್‌ಗೆ ಬರ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವಾಗಲೂ ಸರ್ಕಾರ ಬಂದಾಗ ಇನ್ ಕಮಿಂಗೂ, ಸರ್ಕಾರದ ಅವಧಿ ಮುಗಿಯಲು ಬಂದಾಗ ಔಟ್ ಗೋಯಿಂಗ್. ಇದು ಸಾಮಾನ್ಯ ಸಂಗತಿ ಅಲ್ವಾ. ಹೊಸದರಲ್ಲಿ ಒಂದಷ್ಟು ಜನ ಪಿಕ್ಚರ್ ಚೆನ್ನಾಗಿರಬಹುದು ಎಂದು ಟಿಕೆಟ್ ತೆಗೆದುಕೊಳ್ಳುತ್ತಾರೆ. ಆಮೇಲೆ “ಇದು ಏನ್ಲಾ ವೇಸ್ಟ್ ಕಣ್ಲಾ ಬಂದಿದ್ದೇ ವೇಸ್ಟ್” ಅಂತ ಅರ್ಧಕ್ಕೆ ಎದ್ದು ಬರ್ತಾರೆ. ಅಲ್ಲಿದ್ದವರೇ ಅಸಮಾಧಾನದಿಂದ ಹೊರಗೆ ಬರ್ತಿದ್ದಾರೆ. ಹೋಗುವವರು ಒಳಗೆ ಹೋಗಿ ಏನು ಮಾಡ್ತಾರೆ ಎಂದರು.

ಬಿಜೆಪಿ ಪಕ್ಷ ಕಾಲ ಕಾಲಕ್ಕೆ ಪ್ರಯೋಗಗಳನ್ನು ಮಾಡುತ್ತಾ ಬಂದಿದೆ. ಅನುಭವ ಇದ್ದವರಿಗೆ ಕೊಟ್ಟಿದೆ ಅನುಭವ ಇಲ್ಲದಿದ್ದವರಿಗೂ ಕೊಟ್ಟಿದೆ. ಅದನ್ನು ಚರ್ಚೆ ಮಾಡಲು ಬಯಸಲ್ಲ. ಯಾರಿಗೆ ಏನು ಇದೆಯೋ‌ ಗೊತ್ತಿಲ್ಲ. ನನಗಂತೂ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದ ಜವಾಬ್ದಾರಿ ಕೇಳಿ ಪಡೆಯುವುದಲ್ಲ. ಹಾಗಾಗಿ ನಾನು ಕೇಳಲು ಯಾವತ್ತು ಹೋಗಿಲ್ಲ. ನಾನು ಸಿದ್ಧಾಂತನ‌ ನಂಬಿ ಕೆಲಸ ಮಾಡುತ್ತಾ ಬಂದಿದ್ದೀನಿ. ಕೊಡೋದನ್ನೆಲ್ಲಾ ಭಗವಂತನ ಹತ್ತಿರ ಕೇಳೋದು ನನ್ನ ಕೆಲಸ ಕೊಡೋದು ಭಗವಂತನಿಗೆ ಬಿಟ್ಟದ್ದು. ಹಾಗೆ ಪಾರ್ಟಿಯ ವರಿಷ್ಠರಿಗೆ ಯಾರಿಗೆ ಯಾವಾಗ ಏನು ಕೊಡಬೇಕು ಅವರಿಗೆ ಬಿಟ್ಟದ್ದು. ಈಗ ಯಾವುದೇ ವಿಷಯಗಳಲ್ಲಿ ನಾನಿಲ್ಲ ಎಂದರು.

ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಾಂಪಿಟೇಷನ್ ಇಟ್ಟಿರಲಿಲ್ಲ. ಹಾಗಾಗಿ ಬೇರೆಯವರು ರೇಸ್‌ನಲ್ಲಿ ಇರುವ ಪ್ರಶ್ನೆಯೇ ಇಲ್ಲ. ನಾನಂತು ಹಿಂದೆಯೂ ಯಾವುದೇ ಹುದ್ದೆಯ ಆಕಾಂಕ್ಷಿಯಾಗಿರಲಿಲ್ಲ. ಜವಾಬ್ದಾರಿಗಳೆಲ್ಲಾ ಅಚಾನಕ್ಕಾಗಿ, ತಾನಾಗಿಯೇ ಒದಗಿ ಬಂದದ್ದು. ಈಗ ಯಾವುದೇ ಜವಾಬ್ದಾರಿ ಇಲ್ಲ, ಸಾಮಾನ್ಯ ಕಾರ್ಯಕರ್ತ ಎಂದುಕೊಂಡಿದ್ದೀನಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು