News Karnataka Kannada
Thursday, May 09 2024
ಹಾಸನ

ಚುನಾವಣೆ ಕಾವು: ಬಿಜೆಪಿಯಿಂದ ಬಾಡೂಟ, ಎಣ್ಣೆ ಪಾರ್ಟಿ

election heat is in full swing in the Hassan district
Photo Credit : News Kannada

ಹಾಸನ: ಜಿಲ್ಲೆಯಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸೆಳೆಯಲು ಹಲವು ರೀತಿಯ ಆಮಿಷ ಒಡ್ಡುತ್ತಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಹೆಚ್.ಕೆ ಸುರೇಶ್ ಮತದಾರರಿಗೆ ಭರ್ಜರಿ ಬಾಡೂಟ ಆಯೋಜಿಸಿದ್ದು ಇದರ ಜೊತೆಗೆ ಗಿಫ್ಟ್ ನೀಡಿದ್ದಾರೆ.

ಬೇಲೂರು ತಾಲೂಕಿನ ಅಗಸರಹಳ್ಳಿ ಬಾರೆಯಲ್ಲಿ ನೂರಾರು ಜನರಿಗೆ ಗುಂಡು ತುಂಡು ಪಾರ್ಟಿ ಆಯೋಜನೆ ಮಾಡಿದ್ದು, ಕಂಠಪೂರ್ತಿ ಕುಡಿದು, ಬಾಡೂಟ ಮಾಡಿದ ಮತದಾರರು ಎಲ್ಲೆಂದರಲ್ಲಿ ಮಲಗಿದ್ದರು.

ಪ್ರತಿದಿನ ಒಂದೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್‌ಕೆ ಸುರೇಶ್ ಬಾಡೂಟ ಆಯೋಜನೆ ಮಾಡುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಬಾಡೂಟ, ಮದ್ಯ ಜೊತೆಗೆ ಗಿಫ್ಟ್ ಮೂಲಕ ಮತದಾರರಿನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಗುರುವಾರ ಬೇಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು