News Karnataka Kannada
Sunday, April 28 2024
ಹಾಸನ

ಅರ್ಜುನ ಆನೆ  ಸಮಾಧಿ ಮೇಲೆ ಕಾಡಾನೆಗಳ ದಾಳಿ

Elephants attack Arjuna's elephant tomb
Photo Credit : News Kannada

ಹಾಸನ: ಅರ್ಜುನ ಆನೆ  ಸಮಾಧಿ ಬಳಿ ಕಾಡಾನೆಗಳು ದಾಂಧಲೆ ಮಾಡಿ​​ದ ಘಟನೆ ನಡೆದಿದೆ.

ಡಿಸೆಂಬರ್​​ 4ರಂದು ಸಕಲೇಶಪುರ  ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ​ಅರ್ಜುನ ಮೃತಪಟ್ಟಿದ್ದನು.  ಅದೇ ಸ್ಥಳದಲ್ಲಿ ಅರ್ಜುನನ್ನು ಸಮಾಧಿ ಮಾಡಲಾಗಿತ್ತು.

ಈಗ ಅ ಸಮಾಧಿ ಮೇಲೆ ಕಾಡಾನೆಗಳ ಗುಂಪು ದಾಳಿ ಮಾಡಿದೆ.  ಸಮಾಧಿ ಸುತ್ತ ಹಾಕಿದ್ದ ತಂತಿಬೇಲಿಯನ್ನು ನಾಶ ಮಾಡಿದ ಕಾಡಾನೆಗಳ ಗುಂಪು ಅರ್ಜುನನ ಸಮಾಧಿ ಮೇಲೆಲ್ಲಾ ಓಡಾಡಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು