Categories: ಹಾಸನ

ಚಿಕ್ಕಹೊನ್ನೇನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣ ಹೋಮ

ಹಾಸನ: ನಗರಕ್ಕೆ ಹೊಂದಿ ಕೊಂಡಂತಿರುವ ಚಿಕ್ಕಹೊನ್ನೆಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣ ಹೋಮ ನಡೆದಿದ್ದು, ಯಾರೋ ದುಷ್ಕರ್ಮಿಗಳು ನೀರಿಗೆ ವಿಷ ಚೆಲ್ಲಿರುವುದಾಗಿ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ನಗರದ ರಿಂಗ್ ರಸ್ತೆ, ಪಶುವೈದ್ಯಕೀಯ ಕಾಲೇಜು ಹತ್ತಿರ ಇರುವ ಮೂರು ಕೆರೆಗಳಿಗೆ 5 ವರ್ಷದ ಗುತ್ತಿಗೆ ಆಧಾರದ ಮೇಲೆ ಗ್ರಾಮದ ನಾಲ್ಕೈದು ಜನರು ಪಡೆದು ಒಂದು ಲಕ್ಷಕ್ಕೂ ಹೆಚ್ಚಿನ ಮೀನಿನ ಮರಿಗಳನ್ನುಕಳೆದ ವರ್ಷ ಆಗಷ್ಟಗ ತಿಂಗಳಲ್ಲೆ ಬಿಟ್ಟಿದ್ದು, ಕಳೆದ ಎರಡು ದಿನಗಳಿಂದ ಮೀನುಗಳು ಸತ್ತು ಮೇಲೆ ತೇಲುತ್ತಿರುವುದು ಕಂಡು ಬಂದಿದೆ. ಈ ಕೆರೆಯನ್ನು ಹಸಿರು ಭೂಮಿ ಪ್ರತಿಷ್ಠಾನದವತಿಯಿಂದ ಸ್ವಚ್ಛಗೊಳಿಸಿ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ನಂತರದಲ್ಲಿ ಈ ಕೆರೆಗೆ ಮೀನು ಬಿಡಲು ಚಿಕ್ಕಹೊನ್ನೆನಹಳ್ಳಿ ಗ್ರಾಮದ ಕೆಲವರು ಮುಂದೆ ಬಂದು ಗ್ರಾಮಕ್ಕೆ ಹಣ ಕೊಟ್ಟು ಮರಿ ಬಿಡಲಾಗಿತ್ತು.

ಆದರೆ ಈಗ ಮೀನುಗಳು ಸಾವನಪ್ಪುತ್ತಿರುವುದು ಆತಂಕಸೃಷ್ಠಿ ಮಾಡಿದೆ. ಏನಾದರೂ ಗೋವುಗಳು ಈ ಕೆರೆ ನೀರನ್ನು ಕುಡಿದರೇ ಏನಾ ದರೂ ಅನಾಹುತ ಆಗಬಹುದು ಎಂಬುದು ಗ್ರಾಮಸ್ಥರ ಆತಂಕವಾಗಿದೆ. ಈ ಕೆರೆಗೆ ವಿಷ ಬೆರೆಸಿದವರನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ನೀಡಬೇಕೆನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.ಗ್ರಾಮದ ನಾಗೇಶ್, ರಮೇಶ್ ಮತ್ತು ಶಿವಕುಮಾರು ಮಾಧ್ಯಮದೊಂದಿಗೆ ಮಾತನಾಡಿ, ಚಿಕ್ಕಹೊನ್ನೆನಹಳ್ಳಿ ಕೆರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ ಈ ಕೆರೆಗೆ ಬಿಡಲಾಗಿದ್ದು, ನಮಗೆ ಈ ಕೆರೆಯನ್ನು 5 ವರ್ಷಕ್ಕೆ ಗುತ್ತಿಗೆ ನೀಡಿದ್ದು, ಈಗ ಕಳೆದ ಎರಡು ದಿನಗಳಿಂದ ಮೀನುಗಳು ನೀರಿನಲ್ಲೆ ಸತ್ತು ಮೇಲೆ ತೇಲಿ ಬರುತ್ತಿದೆ.

ಈ ಕೆರೆಗೆ ಯಾರೋ ಕಿರಾತಕರು ವಿಷವನ್ನು ಹಾಕಿರುವ ಅನುಮಾನವಿದ್ದು. ಈಗಾಗಲೇ ಸಾವನಪ್ಪಿರುವ ಮೀನಿನ ಮರಿಗಳನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದರು. ಯಾರು ವಿಷ ಪಾಶಣ ಹಾಕಿದ್ದಾರೆ ಎಂಬುದು ತಿಳಿಯುತ್ತಿಲ್ಲ.
ಯಾರೋ ಧ್ವೇಷದ ಹಿನ್ನಲೆಯಲ್ಲಿ ಈ ರೀತಿ ಕೆರೆಗೆ ವಿಷವನ್ನು ಹಾಕಿರುವ ಸಂಶಯವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

Ashitha S

Recent Posts

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

14 mins ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

15 mins ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

32 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

45 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

46 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

1 hour ago