News Karnataka Kannada
Monday, May 06 2024
ಹಾಸನ

ಹಾಸನ: ಜ.೧೩ರಂದು ೯ ಅಡಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣ

Has
Photo Credit : News Kannada

ಹಾಸನ: ಶ್ರವಣೂರು ಗ್ರಾಮದಲ್ಲಿ ಹೊಳೆನರಸೀಪುರ ತಾಲೂಕು ಕುರುಬರ ಸಂಘ ,ಹಳ್ಳಿ ಮೈಸೂರು ಹೋಬಳಿ ಕುರುಬರ ಸಂಘ ಸಂಯುಕ್ತಾಶ್ರಯದಲ್ಲಿ ಜ.೧೩ರಂದು ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಗೇವಾಳು ಮಂಜೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ಜ. ೧೩ರಂದು ೩ ಗಂಟೆಗೆ ನಡೆಯುವ ಕಾರ್ಯಕ್ರಮ ದಲ್ಲಿ ಶ್ರವಣೂರಿನಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೆ ನಿರಂಜನಾ ನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತ ದಿಂದ ವಿವಿಧ ಕಲಾತಂಡಗಳೊಂ ದಿಗೆ ಮೆರವಣಿಗೆಯಲ್ಲಿ ಸಿದ್ದರಾಮ ಯ್ಯ ಹಾಗೂ ಸ್ವಾಮೀಜಿಗಳು ಭಾಗವಹಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲೆ ತಾಲೂಕು ಮುಖಂಡರು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ವೇದಿಕೆ ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ಪ್ರತಿಮೆ ಸ್ಥಾಪನೆ ಸಂಬಂಧ ಗೊಂದಲ ಏರ್ಪಟ್ಟಿತ್ತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಇದೀಗ ಖಾಸಗಿ ಜಾಗದಲ್ಲಿ ೯ ಅಡಿ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುತ್ತಿದೆ.

ಇದಕ್ಕೆ ಗ್ರಾಮದ ಎಲ್ಲಾ ಸಮುದಾಯದವರು ಒಪ್ಪಿಗೆ ಸೂಚಿಸಿದ್ದು ಯಾವುದೇ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದರು , ಈ ಹಿಂದೆ ಪ್ರತಿಮೆ ಸ್ಥಾಪನೆ ಮಾಡುವಾಗ ರಾಜ್ಯ ಹೆದ್ದಾರಿ ಎಂಬುದನ್ನು ತಿಳಿಯದೆ ಏಕಾಏಕಿ ಅನಾವರಣ ಮಾಡಲಾಗಿತ್ತು ಆದ್ದರಿಂದ ಗ್ರಾಮದಲ್ಲಿ ಗೊಂದಲ ಏರ್ಪಟ್ಟು ಪ್ರತಿಮೆ ತೆರವು ಮಾಡಲಾಗಿತ್ತು.

ಇದೀಗ ಪ್ರಕರಣ ಸುಖಾಂತ್ಯ ಕಂಡಿದ್ದು ಜ. ೧೩ರಂದು ಅಧಿಕೃತವಾಗಿ ಪ್ರತಿಮೆ ಅನಾವರಣ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಂಜೇ ಗೌಡ, ಸುರೇಶ್, ದಾಶರತಿ, ಎ.ಡಿ. ಚಂದ್ರಶೇಖರ್, ನಂಜೇಗೌಡ ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು