ಹಾಸನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ. ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಎ.ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ.ನೆಡ್ಡ ಪಕ್ಷದ ಶಾಲು ಹೊದಿಸುವ ಮೂಲಕ ಬರಮಾಡಿಕೊಂಡರು. ಬಳಿಕ ಮಾತನಾಡಿದ ಎ.ಟಿ.ರಾಮಸ್ವಾಮಿ ಅವರು ಬಿಜೆಪಿ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೆಲಸ ಮಾಡುತ್ತೇನೆ ಎಂದರು.
ಈ ಹಿಂದೆ ರಾಮಸ್ವಾಮಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ರಾಮಸ್ವಾಮಿ ಈಗ ಪಕ್ಷ ತೊರೆಯಲು ಮುಂದಾಗಿದ್ದಾರೆ ಈ ಕಾರಣದಿಂದ ರಾಜಿನಾಮೆ ನೀಡಿದ್ದಾರೆ ಬಳಿಕ ಮಾತನಾಡಿದ ಅವರು ನಾನು ಶಾಸಕ ಸ್ಥಾನಕ್ಕೆ ಸಂತೋಷದಿಂದ ರಾಜಿನಾಮೆ ಸಲ್ಲಿಸಿದ್ದೇನೆ ಇಷ್ಟು ದಿನ ಶಾಸಕನಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟ ಜೆಡಿಎಸ್ ಗೆ ಧನ್ಯವಾದಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿರುವ ತೃಪ್ತಿ ನನಗಿದೆ ಎಂದರು.
ನಾನು ಯಾವುದೇ ವಯಕ್ತಿಕ ಹಿತಾಸಕ್ತಿಯಿಂದ ರಾಜಕೀಯ ಮಾಡಿಲ್ಲ ಶಾಸಕನಾಗಿದ್ದಾಗ ಜನಪರ ಕೆಲಸ ಮಾಡಿದ್ದೇನೆ ಜೆಡಿಎಸ್ ಬಿಡುವುದಾಗಿ ನಾನು ಎಲ್ಲೂ ಹೇಳಿಲ್ಲ ಆದರೆ ಜೆಡಿಎಸ್ ಮುಖಂಡರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೆ ನನಗೆ ಮುಳುವಾಯಿತು ಎಂದಿದ್ದಾರೆ.