News Karnataka Kannada
Monday, April 29 2024
ಹಾಸನ

ಹಾಸನ: ಗೆಳೆಯರೊಂದಿಗೆ ಪಾರ್ಟಿ ಮಾಡಿ ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಸ್ಪದ ಸಾವು

Hassan: A young man who was sleeping in a car after partying with his friends died an untimely death
Photo Credit :

ಹಾಸನ: ತಡರಾತ್ರಿ ಗೆಳೆಯೊಂದಿಗೆ ಪಾರ್ಟಿ ಮಾಡಿದ್ದ ಯುವಕ ಮನೆಗೆ ಹೋಗಲು ಸಾಧ್ಯವಾಗದೆ ಕಾರಿನಲ್ಲೇ ಮಲಗಿದ್ದು, ಬೆಳಗಾಗುವ ವೇಳೆಗೆ ರಕ್ತವಾಂತಿ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ.
ಪಾರ್ಟಿ ಮುಗಿಸಿ ಕಾರಿನಲ್ಲಿ ಮಲಗಿದ ೨೪ ವರ್ಷದ ಚೇತನ್ (೨೪) ಮೃತ ದುರ್ದೈವಿಯಾಗಿದ್ದು, ಮೃತ ಯುವಕ ಬೇಲೂರು ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ.

ನಿನ್ನೆ ರಾತ್ರಿ ಮೊಬೈಲ್ ಅಂಗಡಿ ಎದುರು ಬೈಕ್ ನಿಲ್ಲಿಸಿ ಸ್ನೇಹಿತರಾದ ಗೌತಮ್, ದರ್ಶನ್, ಮಿಥುನ್ ಜೊತೆ ಪಾರ್ಟಿಗೆ ತೆರಳಿದ್ದ ಚೇತನ್, ರಾತ್ರಿ ಹನ್ನೆರಡು ಗಂಟೆಯವರೆಗೆ ಬಂದು ಮನೆಗೆ ಹೋಗದೆ ಶಾಪ್ ಎದುರು ಕಾರು ನಿಲ್ಲಿಸಿ ಮಲಗಿಕೊಂಡಿದ್ದನಂತೆ. ರಾತ್ರಿ ಗೌತಮ್ ರೂಂನಲ್ಲಿ ಪಾರ್ಟಿ ಮಾಡಿದ ಸ್ನೇಹಿತರು, ಇಂದು ಬೆಳಗ್ಗೆ ೧೦ ಗಂಟೆಗೆ ಬಂದು ಕಾರು ಡೋರ್ ತೆಗೆದು ನೋಡಿದ ಸಂರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

ಕಾರಿನ ಹಿಂಬದಿಯ ಸೀಟ್‌ನಲ್ಲಿ ರಕ್ತ ವಾಂತಿ ಮಾಡಿಕೊಂಡು ಮಲಗಿದ್ದ ಚೇತನ್‌ನನ್ನು ಕಂಡು ಗೌತಮ್ ಕ್ಷಣಕಾಲ ಶಾಕ್‌ಗೆ ಒಳಗಾಗಿದ್ದಾನೆ. ಕೂಡಲೇ ಗೆಳೆಯರಾದ ದರ್ಶನ್, ಮಿಥುನ್‌ಗೆ ಫೋನ್ ಮಾಡಿ ತಿಳಿಸಿ ಸಹಾಯಕ್ಕೆ ಕರೆದಿದ್ದಾನೆ. ಆದರೆ ಚೇತನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ದರ್ಶನ್, ಮಿಥುನ್ ಇಬ್ಬರು ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ಇತ್ತ ಕಾರಿನಲ್ಲಿದ್ದ ಮೃತದೇಹ ಗೌತಮ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಘಟನೆ ಕುರಿತಂತೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತ ಚೇತನ್ ಪೋಷಕರು ತಮ್ಮ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು