ಹಾಸನ: ಇಲ್ಲಿನ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೇಳುವ ಹಕ್ಕು ಭವಾನಿ, ಸ್ವರೂಪ್ ಸೇರಿದಂತೆ ಪ್ರತಿ ಯೊಬ್ಬ ಕಾರ್ಯಕರ್ತನಿಗೂ ಇದೆ ಎಂದು ಜೆಡಿಎಸ್ ರಾಜ್ಯಾ ಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.
ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಟಿಕೆಟ್ ಯಾರಿಗೆ ಕೊಡಬೇಕು ಎನ್ನುವು ದನ್ನು ಪಕ್ಷ ತೀರ್ಮಾನ ಮಾಡುತ್ತೆ ಎಂದಿದ್ದಾರೆ. ಜೊತೆಗೆ ಕಳೆದ ಭಾನುವಾರ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಭೆ ಕರೆದೇ ಇಲ್ಲ ಎಂದು ಇಬ್ರಾಹಿಂ ಉಲ್ಟಾ ಹೊಡೆದಿದ್ದಾರೆ.
ಹೆಚ್.ಡಿ ರೇವಣ್ಣ, ಹೆಚ್.ಡಿ ಕುಮಾರಸ್ವಾಮಿ, ಬಾಲಕೃಷ್ಣ, ರಮೇಶ್ ಈ ನಾಲ್ಕು ಜನ ಸಹೋದರರ ನಡುವೆ ಭಿನ್ನಾಭಿಪ್ರಾಯ ಬರುತ್ತೆ ಅಂತಾ ಯಾರಾದ್ರೂ ತಿಳಿದುಕೊಂಡಿ ದ್ದರೆ ಅದು ತಪ್ಪು ಕಲ್ಪನೆ. ಆ ನಾಲ್ಕು ಮಂದಿ ಯಾವತ್ತಿದ್ದರೂ ಒಂದೇ.ಅವರು ಹೇಗಿದ್ದಾರೆ ಅನ್ನೋದನ್ನ ಕಳೆದ ೫೦ ವರ್ಷಗಳಿಂದಲೂ ನೋಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.