ಹಾಸನ: ಪ್ರಧಾನಿ ನರೇಂದ್ರ ಮೋದಿ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಿಮರಿ ತರ ಇರುತ್ತಾರೆ ಎಂಬ ಮಾಜಿ ಮುಖ್ಯ ಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆಗೆ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಹಾಗೂ ಸಿದ್ದರಾಮಯ್ಯ ಇಂತಹ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಶಾಸಕ ಪ್ರೀತಂಗೌಡ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯನವರ ಹೇಳಿಕೆ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವ ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ, ಸೌಭಾಗ್ಯ ಕೊಡುತ್ತೇವೆ. ಎಂದು ಹೇಳಿ ದೌರ್ಭಾಗ್ಯ ನೀಡಿಲ್ಲ, ಈ ರೀತಿಯ ಕೆಲಸ ನಾವು ಮಾಡಿಲ್ಲ ಎಂದರು.
ರಾಜ್ಯಕ್ಕೆ ಮಹತ್ವವಾದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ, ಅವರಿಗೆ ಅದರ ಬಗ್ ಜ್ಞಾನ ಇಲ್ಲ, ರಾಜಕೀಯ ಪ್ರೇರಿತ ಹೇಳಿಕೆಗಳನ್ನ ಕೊಡುವುದು ಸಿದ್ಧರಾಮಯ್ಯ ರೂಢಿ ಮಾಡಿಕೊಂಡಿದ್ದಾರೆ. ತಳಬುಡ ಇಲ್ಲದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬಗ್ಗೆ ಟೀಕೆ ಮಾಡುವಾಗ ಬಳಸಿರುವ ಭಾಷೆ ಯು ಅವರ ಘನತೆಗೆ ತಕ್ಕುದಲ್ಲ. ಅವರು ಆಡಿದ ಮಾತುಗಳಿಗೆ ರಾಜ್ಯದ ಜನತೆಯ ಕ್ಷಮೆ ಕೀಳಬೇಕು, ರಾಜ್ಯದ ಚುಕ್ಕಾಣಿ ಹಿಡಿದಿರುವ ಬೊಮ್ಮಾಯಿ ಅವರನ್ನು ಸಂಭೋದಿಸಿ ಆಡಿದ ಮಾತುಗಳು ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು.
ಸಿದ್ದರಾಮಯ್ಯವರು ತಮ್ಮ ಹಿರಿತನ, ಸ್ಥಾನಮಾನಕ್ಕೆ ತಕ್ಕಂತ ಮಾತನಾಡಿದರೆ ಅವರಿಗೂ ಶೋಭೆ ಮುಖ್ಯಮಂತ್ರಿಯಾಗಿ, ಹಣಕಾಸು ಸಚಿವರಾಗಿ ಅನೇಕ ಖಾತೆಗಳನ್ನು ನಿಭಾಯಿಸಿರುವ ಅವರು, ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆ ಎಂಬುದನ್ನು ಮರೆಯಬಾರದು.
ನಮ್ಮಂತ ಯುವ ರಾಜ ಕಾರಣಿಗಳಿಗೆ ಅವರು ಮಾದರಿ ಯಾಗಬೇಕೆ ಹೊರತು ಟೀಕೆಗೆ ಆಹಾರವಾಗಬಾರದು. ಇನ್ನು ಮುಂದಾದರೂ ಎಚ್ಚೆತ್ತು ಮಾತ ನಾಡಲಿ, ಇಲ್ಲವಾದರೆ ನಾವು ಕೂಡ ಅದೇ ದಾಟಿಯಲ್ಲಿ ಉತ್ತರ ಕೊಟ್ಟರೆ ನಮಗೂ ಅವರಿಗೂ ವ್ಯತ್ಯಾಸ ಇರುವುದಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ನಾಯಕ ರಾದ ಡಿ.ಕೆ ಶಿವಕುಮಾರ್, ಮಲ್ಲಿ ಕಾರ್ಜುನ ಖರ್ಗೆ ಅವರೊಂದಿಗಿನ ಮುಸುಕಿನ ಗುದ್ದಾಟದ ಹಿನ್ನೆಲೆ ಯಲ್ಲಿ ಹತಾಶರಾಗಿ ಸಿದ್ದರಾಮಯ್ಯ ಅವರು ಬೇರೆ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಲೇವಾಡಿ ಮಾಡಿದರು .
ಮುಖ್ಯಮಂತ್ರಿಗಳಿಗೆ ಹಾಗೂ ಪ್ರತಿಪಕ್ಷದ ನಾಯಕರಿಗೆ ಹೇಗೆ ಮರ್ಯಾದೆ ಕೊಡಬೇಕು ಎಂಬುದನ್ನು ಆಂಧ್ರಪ್ರದೇಶ ತಮಿಳುನಾಡು ರಾಜ್ಯದಲ್ಲಿನ ರಾಜಕೀಯ ನಾಯಕರನ್ನು ನೋಡಿ ಸಿದ್ದರಾಮಯ್ಯ ಅವರು ಕಲಿಯಬೇಕಿದೆ. ಒರ್ವ ರಾಜ್ಯದ ಮುಖ್ಯಮಂತ್ರಿಯನ್ನು ಟೀಕಿಸುವ ಮುನ್ನ ೧೦ ಬಾರಿ ಯೋಚಿಸಬೇಕು ಎಂದು ಪ್ರೀತಂ ಗೌಡ ಹೇಳಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿ, ವಿರೋಧ ಪಕ್ಷದ ನಾಯಕರಾಗಿ ಲಘುವಾಗಿ ಮಾತಾಡೋದು ಅವರ ಸಂಸ್ಕೃತಿ ತೋರಿಸಿದೆ. ಮೋದಿ ಮುಂದೆ ಸಿಎಂ ಬನವರಾಜ ಬೊಮ್ಮಾಯಿ ಅವರು ಧೈರ್ಯವಾಗಿ ಮಾತಾನಾಡುತ್ತಾರೆ. ಸಿಎಂ ಸ್ಥಾನಕ್ಕೆ ಅಗೌರವ ತೋರಿದ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು, ಸಿದ್ದರಾಮಯ್ಯ ಹೇಳಿಕೆ ಬಿಜೆಪಿಯಿಂದ ತೀವ್ರವಾಗಿ ಖಂಡನೆಗೆ ಆಗ್ರಹ ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ , ಸುರೇಶ್ ಕುಮಾರ್, ರಂಗನಾಥ್, ಇದ್ದರು