ಹಾಸನ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಹೇಮಾವತಿ ಪ್ರತಿಮೆ ಬಳಿ ಹೆಚ್.ಡಿ. ದೇವೇಗೌಡರ ಭಾವಚಿತ್ರ ಕ್ಕೆ ಕ್ಷೀರಾಭಿಷೇಕ ಮಾಡಲಾಯಿತು.
ನಂತರ ಗಾಂಧಿ ಬಜಾರ್ ಶ್ರೀ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಅಜಾದ್ ರಸ್ತೆಯ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ವೇಳೆ ಶಾಸಕರಾದ ಸ್ವರೂಪ್ ಪ್ರಕಾಶ್ , ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ರಾಜೇಗೌಡರು, ತಾಲೂಕು ಜೆಡಿಎಸ್ ಅಧ್ಯಕ್ಷರಾದ ಎಸ್.ದ್ಯಾವೇಗೌಡರು,ಮಾದ್ಯಮ ವಕ್ತಾರ ರಘು ಹೊಂಗೆರೆ, ಶಂಕರ್, ಜಯರಾಂ,ಸಂಗಮ್, ಸಮೀರ್ ಸೇರಿದಂತೆ ಪಕ್ಷದ ಮುಖಂಡರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ,ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಿದ್ದರು.