ಹಾಸನ: ಸಕಲೇಶಪುರ-ಆಲೂರು ಕ್ಷೇತ್ರದ ಶಾಸಕರಾದ ಹೆಚ್. ಕೆ.ಕುಮಾರಸ್ವಾಮಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಕೋರಿದರು.
ಸಕಲೇಶಪುರ-ಆಲೂರು ಭಾಗದ ಮುಂದುವರೆದಿರುವ ಕಾಡಾನೆ ಸಮಸ್ಯೆ ನಿಯಂತ್ರಿಸುವ ಜೊತೆಗೆ ಬೆಳೆ ಹಾನಿಗೆ ಶೀಘ್ರವೇ ಪರಿಹಾರ ಬಿಡುಗಡೆ ಮಾಡುವಂತೆ ತಿಳಿಸಿದರು.
ಹೆತ್ತೂರು ಹೋಬಳಿ ಮೂಕನ ಮನೆ ಫಾಲ್ಸ್ ಬಳಿ ಪ್ರವಾಸಿ ಮೂಲಭೂತ ಸೌಕರ್ಯ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ಹಾಗೂ ಆದಷ ಬೇಗ ಕೆಲಸ ಮುಗಿಸಲು ಸಹಕರಿಸುವಂತೆ ಶಾಸಕರು ಕೋರಿದರು.
ಬಿಸಿಲೆ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ಹಾಗೂ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಹೆಚ್.ಕೆ ಕುಮಾರಸ್ವಾಮಿ ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ,ಉಪ ಅರಣ್ಯ ಸಂರಕ್ಷಣಾ ಧಿಕಾರಿ ಬಸವರಾಜ್, ಎತ್ತಿನಹೊಳೆ ಯೋಜನೆ ಮುಖ್ಯ ಇಂಜಿನಿಯರ್ ಮಾಧವ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.