News Karnataka Kannada
Friday, May 03 2024
ಹಾಸನ

ಹಾಸನ: ಅರಣ್ಯ ಇಲಾಖೆಯ ಸಮಸ್ಯೆಗಳ ಪರಿಹಾರ ಕುರಿತು ಚರ್ಚೆ

Hassan: Discussion on solutions to forest department's problems
Photo Credit : News Kannada

ಹಾಸನ: ಸಕಲೇಶಪುರ-ಆಲೂರು ಕ್ಷೇತ್ರದ ಶಾಸಕರಾದ ಹೆಚ್. ಕೆ.ಕುಮಾರಸ್ವಾಮಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಕೋರಿದರು.

ಸಕಲೇಶಪುರ-ಆಲೂರು ಭಾಗದ ಮುಂದುವರೆದಿರುವ ಕಾಡಾನೆ ಸಮಸ್ಯೆ ನಿಯಂತ್ರಿಸುವ ಜೊತೆಗೆ ಬೆಳೆ ಹಾನಿಗೆ ಶೀಘ್ರವೇ ಪರಿಹಾರ ಬಿಡುಗಡೆ ಮಾಡುವಂತೆ ತಿಳಿಸಿದರು.

ಹೆತ್ತೂರು ಹೋಬಳಿ ಮೂಕನ ಮನೆ ಫಾಲ್ಸ್ ಬಳಿ ಪ್ರವಾಸಿ ಮೂಲಭೂತ ಸೌಕರ್ಯ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ಹಾಗೂ ಆದಷ ಬೇಗ ಕೆಲಸ ಮುಗಿಸಲು ಸಹಕರಿಸುವಂತೆ ಶಾಸಕರು ಕೋರಿದರು.

ಬಿಸಿಲೆ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ಹಾಗೂ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಹೆಚ್.ಕೆ ಕುಮಾರಸ್ವಾಮಿ ಮನವಿ ಮಾಡಿದರು.

ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ,ಉಪ ಅರಣ್ಯ ಸಂರಕ್ಷಣಾ ಧಿಕಾರಿ ಬಸವರಾಜ್, ಎತ್ತಿನಹೊಳೆ ಯೋಜನೆ ಮುಖ್ಯ ಇಂಜಿನಿಯರ್ ಮಾಧವ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು