ಹಾಸನ: ಇಂದು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯ ಗ್ಯಾರಂಟಿ ಕಾರ್ಡ್ ಗಳನ್ನ ಹಂಚ ಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳಿ ಹೇಳಿ ಯಾರನ್ನು ನಂಬ ಬೇಕೋ ಎಂದು ಗೊತ್ತಾಗದ ಸ್ಥಿತಿಯಲ್ಲಿ ಜನರಿದ್ದಾರೆ. ನಾವು ಹಿಂದೆ ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಈಗಾಗಲೇ ಪ್ರಕಟಿಸಿರುವ ಪ್ರತಿ ಮನೆಗೆ ೨೦೦ ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಎಲ್ಲ ಮನೆಗಳ ಯಜಮಾನಿಗೆ ೨,೦೦೦ ರೂ. ನೀಡುವ ಯೋಜನೆ ಸಹಿತ ಪ್ರಣಾಳಿಕೆ ಇರುವ ಗ್ಯಾರಂಟಿ ಕಾರ್ಡ್ಗಳನ್ನು ಮನೆ ಮನೆಗೆ ತಲುಪಿಸಿ ಅವರಿಂದ ಸ್ವೀಕೃತಿಯ ನ್ನೂ ಪಡೆದುಕೊಳ್ಳಲಾಗುವುದು ಎಂದರು.
ಇದಕ್ಕಾಗಿ ಎಲ್ಲ ಬೂತ್ ಮಟ್ಟದ ಸಮಿತಿಗಳನ್ನು ಸಂಘಟಿಸಲಾಗುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ತಿಂಗಳಿನಿಂದಲೇ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ೧೦ ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ನ ರಾಜ್ಯ ಘಟಕ ಘೋಷಣೆ ಮಾಡದೆ ಎಂದರು.
ಪಕ್ಷದಿಂದ ಈಗಾಗಲೇ ಎರ ಡು ಗ್ಯಾರಂಟಿ ಘೋಷಣೆ ಮಾಡಿ ದ್ದೇವೆ. ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆ ಘೋಷಣೆ ಮಾಡಿದ್ದೇವೆ. ಮೂರನೇ ಘೋಷಣೆಯಾಗಿ ಅನ್ನ ಭಾಗ್ಯದ ಅಕ್ಕಿ ೭ ಕೆ.ಜಿಯಿಂದ ೫ ಕೆ.ಜಿಗೆ ಇಳಿಸಿದ್ದಾರೆ. ಆದ್ದರಿಂದ ಮೂರನೇ ಗ್ಯಾರಂಟಿ ಪ್ರಕಟಿಸುತ್ತಿದ್ದೇವೆ.
ಜನರ ಹಸಿವು ನೀಗಿಸಲು ಅನ್ನಭಾಗ್ಯ ಅಕ್ಕಿ ಪ್ರತಿ ವ್ಯಕ್ತಿಗೆ ೧೦ ಕೆ.ಜಿ ಅಕ್ಕಿ ಕೊಡಲು ಕಾಂಗ್ರೆಸ್ ಮೂರನೇ ಗ್ಯಾರಂಟಿ ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ವರಿಗೆ ೧೦ ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.
ಹಿಂದೆ ಕಾಂಗ್ರೆಸ್ ಅಧಿಕಾರ ವಧಿಯಲ್ಲಿ ಏಳು ಕೆ.ಜಿ ಅಕ್ಕಿ ಉಚಿ ತವಾಗಿ ಕೊಡಲು ತೀರ್ಮಾನ ಮಾಡಲಾಗಿತ್ತು. ಬಿಜೆಪಿಯವರು ೭ ರಿಂದ ೫ಕ್ಕೆ ಇಳಿಸಿದರು ಎರಡು ಕೆಜಿ ಕಡಿಮೆ ಮಾಡಿದರು ಎಂದು ದೂರಿದರು.
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬಡ ಮಧ್ಯಮ ವರ್ಗದ ಜನರು ಬದುಕು ನಡೆಸಲು ಹರಸಾಹಸ ಪಡುತ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಅದಾನಿ ಅಂಬಾನಿ ಬೆಳವಣಿಗೆಗೆ ಶ್ರಮಿಸು ತ್ತಿದ್ದು ಬಡವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅಬ್ದುಲ್ ಹಕೀಮ್, ಪ್ರಕಾಶ್, ಗುರು , ಭೂದೇಶ್ ಇದ್ದರು.
ಸ್ವರೂಪ್ ಕಾಂಗ್ರೆಸ್ ಸೇರುವ ಬಗ್ಗೆ ಗೊತ್ತಿಲ್ಲ: ಜಿಲ್ಲಾ ರಾಜಕೀಯ ಬೆಳವಣಿಗೆಯಲ್ಲಿ ಎಚ್ಪಿ ಸ್ವರೂಪ್ ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಹೇಶ್, ಅವರು ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ತಿಳಿದಿಲ್ಲ ಹಾಗೇನಾದರೂ ಸನ್ನಿವೇಶ ಗಳು ಎದುರಾದರೆ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.