ಹಾಸನ: ಶ್ರವಣಬೆಳಗೊಳ ಶಾಸಕ ಹಾಗೂ ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಸರಕಾರ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಮತ್ತು ಆರೋಗ್ಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಪಟ್ಟಣದ ಚನ್ನಕೇಶವಗೌಡ ಕಲ್ಯಾಣ ಮಂಟಪದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಮತ್ತು ಸಹಕಾರಿ ಸಂಘಗಳು ಯಶಸ್ವಿನಿ ಯೋಜನೆಗೆ ಬೇಡಿಕೆ ಇಟ್ಟಿದ್ದವು. ಇದರ ನಂತರ, ರಾಜ್ಯ ಸರ್ಕಾರವು ಯಶಸ್ವಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ 300 ಕೋಟಿ ರೂ.ಗಳನ್ನು ಘೋಷಿಸಲಾಗಿದೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ರೈತರಿಗೆ ಸಾಲ ಮನ್ನಾ ಯೋಜನೆ ಸೇರಿದಂತೆ ಹೈನುಗಾರಿಕೆ ಮತ್ತು ಉದ್ಯಮಗಳಿಗೆ ಸಾಲ ನೀಡಲು ಸಹಕಾರಿ ವಲಯಕ್ಕೆ ಅವಕಾಶ ನೀಡಿದ್ದರು. ನಮ್ಮದೇ ಸರ್ಕಾರ ಇಲ್ಲದಿದ್ದಾಗ ಸ್ಥಳೀಯ ಶಾಸಕರು ಅನುದಾನ ತರುವ ಮೂಲಕ ಬೇಲೂರಿನ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದರು.