Categories: ಹಾಸನ

ಹಾಸನ: ದ್ವೇಷ ರಾಜಕೀಯ ಬಿಟ್ಟು ಅಭಿವೃದ್ಧಿ ಕಡೆ ಹೆಚ್ಚು ಗಮನ – ಸ್ವರೂಪ್ ಪ್ರಕಾಶ್

ಹಾಸನ: ಎಲ್ಲಾ ವರ್ಗದ ಜನರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದು ದ್ವೇಷ ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ಹಿರಿಯರಾದ ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್ ಡಿ ರೇವಣ್ಣ, ಭವಾನಿ ರೇವಣ್ಣ ಅವರು ಸೇರಿದಂತೆ, ಸಂಸದರಾದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರ ಸಲಹೆ ಸಹಕಾರದಿಂದ ಚುನಾವ ಣೆಯಲ್ಲಿ ಗೆಲುವು ಪಡೆಯಲು ಸಹಕಾರಿಯಾಯಿತು. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಮಾಜಿ ಶಾಸಕರಾದ ಪ್ರೀತಮ್ ಗೌಡ ಅವರು ಯಾವುದೊ ಒಂದು ವರ್ಗದ ವಿರುದ್ಧ ಮಾತನಾಡಿದ್ದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರದೇ ಆದ ಹಕ್ಕಿದ್ದು ಯಾರ ಹೆದರಿಕೆ ಬೆದರಿಕೆಗೂ ಹೆದರುವ ಪ್ರಶ್ನೆಯೇ ಇಲ್ಲ.  ಎಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸುವುದಾಗಿ ಸ್ವರೂಪ್ ಭರವಸೆ ನೀಡಿದರು.

ನಗರದ ಕೆಲ ವಾರ್ಡ್‌ಗಳಲ್ಲಿ ಚುನಾವಣೆ ಫಲಿತಾಂಶ ಬಳಿಕ ಕಸ ವಿಲೇವಾರಿ ಮಾಡುತ್ತಿಲ್ಲ ಎಂಬ ದೂರು ಗಳು ಬಂದಿದ್ದು ಇದಕ್ಕೆ ಕೆಲ ಸಂಘ ಸಂಸ್ಥೆಗಳು ತಡೆಯೊಡ್ಡಿದ್ದು ಇನ್ನೆರಡು ದಿನದಲ್ಲಿ ನಗರಸಭೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದು ಸ್ವರೂಪ್ ಭರವಸೆ ನೀಡಿದರು.

ಈ ಬಾರಿ ೮೫,೦೦೦ ಸಾವಿ ರಕ್ಕೂ ಹೆಚ್ಚು ಮತಗಳನ್ನು ನೀಡಿ ನನ್ನನ್ನು ಗೆಲ್ಲಿಸಿದ್ದು ಜೆಡಿಎಸ್ ಪಕ್ಷಕ್ಕೆ ಕಳೆದ ಬಾರಿಗಿಂತ ಸಾವಿರಾರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೇನೆ. ಮುಂದಿನ ದಿನಗಳಲ್ಲಿ ಜನರ ಸಲಹೆ ಸೂಚನೆಯನ್ನು ಪಡೆದು ಅಭಿವೃದ್ಧಿ ಕಾರ್ಯದ ಕಡೆ ಗಮನ ಹರಿಸುವುದಾಗಿ ಹೇಳಿದ ಅವರು ಫುಡ್ ಪಾರ್ಕ್ ತೆರವು ಮಾಡುವ ವಿಚಾರವಾಗಿ ಯಾವು ದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಶಾಸಕರು ಮುಂದಿನ ಚುನಾವಣೆಗಳಿಗೆ ರಣಕಹಳೆ ಊದುವ ವಿಚಾರವಾಗಿ ಮಾತನಾ ಡಿದ್ದು ಅಂತಹ ಪದ ಬಳಕೆ ಬೇಡ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಾಸುದೇವ್, ರಘು ಹೊಂಗೆರೆ, ಸ್ವಾಮಿಗೌಡ , ನವೀನ್, ಆರಿಫ್ ಇದ್ದರು.

ಸಂಭ್ರಮ ಶಾಂತಿಯುತವಾಗಿರಲಿ
ಕ್ಷೇತ್ರದ ಮತದಾರರಲ್ಲಿ ಹಾಗೂ ಕಾರ್ಯಕರ್ತರಲ್ಲಿ ವಿನಂತಿಸುತ್ತಿದ್ದು ಯಾವುದೇ ಪ್ರಚೋದನೆಯ ಹೇಳಿಕೆಗೆ ಕಿವಿಗೊಡದೆ, ಚುನಾವಣೆ ಮುಗಿದಿದ್ದು ಗೆಲುವಿನ ಸಂಭ್ರಮಾಚರಣೆ ಶಾಂತಿಯುತವಾಗಿ ಮಾಡಬೇಕು ಎಂದು ಕರೆ ನೀಡಿದರು.

Ashika S

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

51 mins ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

1 hour ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

1 hour ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

1 hour ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

2 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

2 hours ago