ಹಾಸನ: ಹಾಸನ ಜಿಲ್ಲೆಯಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ನಾಯಕರೇ ಸಿದ್ಧರಿಲ್ವಾ? ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನಡೆ ನೋಡಿದರೆ ಪಕ್ಷಕ್ಕೆ ಬರುವವರನ್ನು ಕರೆಯಲು ಇವರೆ ಧೈರ್ಯ ಮಾಡುತ್ತಿಲ್ಲ ಎನ್ನಲಾಗಿದೆ.
ಜೆಡಿಎಸ್ ನಾಯಕರು ಸೆಲ್ಫ್ ಡಿಕ್ಲರೇಷನ್ ಮೇಲೆ ಬರಲಿ ನಾವು ಸೇರಿಸಿಕೊಳ್ಳುತ್ತೇವೆ ಎಂಬ ನಿಲುವಿನಲ್ಲಿ ಕೈ ನಾಯಕರಿದ್ದಾರೆ. ಜೆಡಿಎಸ್ ಶಾಸಕರಾದ ಎ.ಟಿ.ರಾಮಸ್ವಾಮಿ ಹಾಗೂ ಶಿವಲಿಂಗೇಗೌಡರ ಕಾಂಗ್ರೆಸ್ ಎಂಟ್ರಿಗೆ ಸಿದ್ದರಾಮಯ್ಯ, ಡಿಕೆಶಿ ನಡೆ ಅಡ್ಡಿಯಾಗಿದೆ ಎನ್ನಲಾಗಿದೆ. ಇಬ್ಬರು ಪಕ್ಷ ಒಡೆದ ಅಪಖ್ಯಾತಿ ಅಂಟದಂತೆ ಎಚ್ಚರಿಕೆ ವಹಿಸಲು ಮುಂದಾಗಿದ್ದಾರೆ. ಇದು ರಾಜ ಕೀಯ ಮೀರಿದ ಸ್ನೇಹದ ಎಫೆಕ್ಟಾ? ಅಥವಾ ಬೇರೆಯದೆ ರಾಜಕೀಯ ಲೆಕ್ಕಾಚಾರನಾ? ಜೆಡಿಎಸ್ ಕೆಣಕಿ ಕೆಂಗಣ್ಣಿಗೆ ಗುರಿಯಾಗದಂತೆ ಇಬ್ಬರೂ ಆಡುತ್ತಿರುವ ಸೇಫ್ ಗೇಮಾ? ನೀವು ಘೋಷಣೆ ಮಾಡಿ ನಾವು ಕರೆದುಕೊಳ್ಳುತ್ತೇವೆ ಎಂಬ ಸೇಫ್ ಗೇಮಿನ ಲೆಕ್ಕಾಚಾರದ ದಾಳವನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಉರುಳಿಸುತ್ತಿದ್ದಾರೆ.
ಕೈ ನಾಯಕರ ನಡೆಗೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದ ದಳ ಶಾಸಕರು ಗಲಿಬಿಲಿಯಾಗಿದ್ದಾರೆ. ಹಾಸನದಲ್ಲಿ ಜೆಡಿಎಸ್ನ ಇಬ್ಬರು ಶಾಸಕರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಅರಕಲಗೂಡು ಎ.ಟಿ.ರಾಮಸ್ವಾಮಿ ಅರಸಿಕೆರೆಯ ಶಿವಲಿಂಗೇಗೌಡರು ಜೆಡಿಎಸ್ನಿಂದ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಆದರೆ ಕೈ ನಾಯಕರೇ ಅವರನ್ನು ಕರೆಯಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಆದರೆ ನೀವೇ ಪಕ್ಷ ಬಿಡುವ ಘೋಷಣೆ ಮಾಡಿ ನಾವು ಆನಂತರ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ. ಶಾಸಕರ ಸೆಲ್ಫ್ ಡಿಕ್ಲರೇಷನ್ ಅಸ್ತ್ರ ಬಳಸುತ್ತಿರುವ ಕೈ ನಾಯಕರ ನಡೆಯೇ ಜೆಡಿಎಸ್ ಶಾಸಕರಿಗೆ ಆತಂಕ ಉಂಟು ಮಾಡಿದೆ. ಇತ್ತ ಸಿದ್ದರಾಮಯ್ಯ ಹಾಗೂ ಡಿಕೆಶಿಯ ಈ ನಡೆಯಿಂದ ಕೈ ಸೇರಲು ಕಾತುರದಿಂದಿದ್ದ ಜೆಡಿಎಸ್ ಶಾಸಕರ ನೆಮ್ಮದಿ ಕೆಡಿಸಿದೆ.
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…