News Karnataka Kannada
Monday, April 29 2024
ಹಾಸನ

ಹಾಸನ: ಎರಡು ಜಿಲ್ಲೆ ಉಸ್ತುವಾರಿ ಹೊಣೆ ತೃಪ್ತಿ ನೀಡಿದೆ- ಗೋಪಾಲಯ್ಯ

Hassan: I am satisfied with the responsibility of in-charge of two districts: Gopalaiah
Photo Credit : Wikipedia

ಹಾಸನ: ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆ ಮಾಡಿರುವ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ಕಂದಾಯ ಸಚಿವರಾದ ಆರ್. ಅಶೋಕ್ ಅವರೇ ಮಂಡ್ಯ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದರು, ನಂತರ ತಾತ್ಕಾಲಿಕವಾಗಿ ನನಗೆ ಹೆಚ್ಚುವರಿ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದರು. ಇದೀಗ ಕೆಲ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಅವರು ಪ್ರತಿ ಜಿಲ್ಲೆಗೆ ಒಬ್ಬರು ಉಸ್ತುವಾರಿ ಸಚಿವರು ನೇಮಿಸಿದ್ದಾರೆ, ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಮಂಡ್ಯ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ನಂತರ ಕಡಿಮೆ ಅವಧಿಯಲ್ಲಿಯೇ ಉತ್ತಮವಾದ ಕೆಲಸವನ್ನು ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವಿನ ಸಿಡಿ ಜಗಳ ನನಗೆ ಗೊತ್ತಿಲ್ಲ ಅದು ಅವರ ವೈಯಕ್ತಿಕ ವಿಚಾರವಾಗಿದೆ ಎಂದು ಪ್ರತಿಕ್ರಿಸಿದರು .

ನನ್ನ ಅಧಿಕಾರ ಅವಧಿಯಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದ ಸಚಿವರು ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿಲು ಸಾಕಷ್ಟು ನೋವಿನ ನಂತರವೂ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನ ಮಾಡಿದ್ದು ಅಧಿಕಾರವಧಿ ತೃಪ್ತಿ ನೀಡಿದೆ ಎಂದರು.

ಇದಕ್ಕೂ ಮುನ್ನ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಅವರು ನಂತರ ತೆರೆದ ವಾಹನದಲ್ಲಿ ತೆರಳಿ ಪೊಲೀಸ್, ಎನ್‌ಸಿಸಿ ಸೇರಿದಂತೆ ವಿವಿಧ ತೂಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಪೊಲೀಸ್ ,ವಿದ್ಯಾರ್ಥಿಗಳು ಸೇರಿ ಸುಮಾರು ೩೦ ತಂಡಗಳು ಭಾಗಿಯಾಗಿದ್ದ ಪಥ ಸಂಚಲನ ಆಕರ್ಷಕವಾಗಿತ್ತು ನಂತರ ವಿವಿಧ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಣ್ಯರ ಹಾಗೂ ಸಾರ್ವಜನಿಕರ ಮನಸೂರೆಗೊಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು