News Karnataka Kannada
Monday, April 29 2024
ಹಾಸನ

ಹಾಸನ: ಅಕ್ರಮ ಮರಳು ಸಾಗಾಣೆಗೆ ಕಡಿವಾಣ

Hasan
Photo Credit : News Kannada

ಹಾಸನ: ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು ಆಯಕಟ್ಟು ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಶೀಘ್ರದಲ್ಲಿ ಆಗಲಿದೆ ಎಂದು ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು ೨೨ ಮರಳು ಡಿಪೋಗಳು ಇದ್ದು ೩೦ ಲಕ್ಷ ವೆಚ್ಚದಲ್ಲಿ ೫೨ ಸಿಸಿ ಕ್ಯಾಮೆರಾ ಅಳವಡಿಕೆಗೆ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ .
ಆದಷ್ಟು ಶೀಘ್ರದಲ್ಲಿ ನಿಗಧಿತ ಸ್ಥಳದಲ್ಲಿ ಸಿ ಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.

ನಿಯಮದಂತೆ ಬೆಳಗ್ಗೆ ೬ರಿಂದ ಸಂಜೆ ೬ ರವರೆಗೆ ಮರಳು ಸಾಗಾಣಿಕೆಗೆ ಅವಕಾಶ ವಿದೆ ಆದರೆ ರಾತ್ರಿ ವೇಳೆ ಮರಳು ಸಾಕಾಣಿಕೆ ಬಗ್ಗೆ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಿಸಿ ಕ್ಯಾಮೆರಾ ಅಳವಡಿಕೆ ನಂತರ ದಿನದ ೨೪ ಗಂಟೆ ನಿಗಾ ವಹಿಸಲಾಗುವುದು ಈ ಒಂದು ಕಾರ್ಯಾಚರಣೆ ಮುಂದಿನ ಒಂದು ವರ್ಷದವರೆಗೂ ನಡೆಯಲಿದೆ.

ಹೊಸದಾಗಿ ಮರಳು ಗಣಿಗಾರಿಕೆಗೆ ಲೈಸೆನ್ಸ್ ಪಡೆಯುವಾಗ ಆಯಾ ಡಿಪೋ ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಕೆಯನ್ನು ಮಾಡಬೇಕು ಹಾಗೂ ದಿನದ ೨೪ ಗಂಟೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ ಎಂದರು.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಸಾರ್ವಜನಿಕರು ಸಹ ತಿಳಿಸಬಹುದಾಗಿದ್ದು ರಾತ್ರಿ ವೇಳೆ ಅಥವಾ ಅನಧಿಕೃತವಾಗಿ ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ೧೧೨ ನಂಬರಿಗೆ ಕರೆ ಮಾಡುವ ಮೂಲಕ ಮಾಹಿತಿ ನೀಡಬ ಹುದಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು