ಹಾಸನ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿರುವುದು ರಾಜಕೀಯ ವಲಯ ದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಒಕ್ಕಲಿಗ ಸಮುದಾಯದ ಮುಖಂಡ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾ ಣಿಕವಾಗಿ ದುಡಿಯುತ್ತಿರುವ ಡಿಕೆ ಶಿವಕುಮಾರ್ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ಪ್ರಬಲ ಅಭ್ಯ ರ್ಥಿಯಾಗಿದ್ದು ಹಳೇ ಮೈಸೂರು ಭಾಗದ ಜನರು ಹಾಗೂ ಮು ಖಂಡರ ಆಶಯದಂತೆ ಶಿವಕು ಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತವಾಗಿದ್ದು ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದುವ ಮೂಲಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗು ವುದು ಧರ್ಮವಲ್ಲವೇ ಎಂಬ ಪ್ರಶ್ನೆ ಕೇಳಿ ಬಂದಿದೆ.
ದೇವರಾಜು ಅರಸು ಬಳಿಕ ಐದು ವರ್ಷ ಪೂರ್ಣ ಪ್ರಮಾಣದ ಆಡಳಿತ ನೀಡಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರಿಗಿದ್ದು ರಾಜ್ಯದಲ್ಲಿ ಈ ಬಾರಿ ೧೩೫ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶತಪ್ರಯತ್ನ ಮಾಡುತ್ತ ಪಾದಯಾತ್ರೆ ಸೇರಿ ದಂತೆ ಸಂಘಟನೆಯಲ್ಲಿ ತೊಡಗಿದ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ನಾನಾ ಪ್ರಕರಣಗಳನ್ನು ಎದುರಿಸುತ್ತಿದ್ದರು ಐಟಿ ದಾಳಿ ನಂತರವೂ ಧೃತಿಗೆಡದೆ ಪಕ್ಷ ಸಂಘಟಿಸಿ ಸರ್ಕಾರ ರಚನೆ ಹಂತಕ್ಕೆ ತಂದು ನಿಲ್ಲಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಬೆಂಬಲಿಸಿ ಮುಖ್ಯಮಂತ್ರಿ ಆಗಿ ಮಾಡಿದಲ್ಲಿ ಮುಂದಿನ ಲೋಕ ಸಭೆ ಚುನಾವಣೆಯಲ್ಲಿಯೂ ಅನುಕೂಲವಾಗಲಿದೆ ಎಂಬ ವಾದವು ರಾಜಕೀಯ ವಲಯದಲ್ಲಿ ಕೇಳಿ ಬರುತ್ತದೆ .
ಈಗಾಗಲೇ ಐದು ವರ್ಷ ಆಡಳಿತ ನಡೆಸಿರುವ ಸಿದ್ದ ರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಬದಲಿಗೆ ಸಾಮಾಜಿಕ ನ್ಯಾಯದಡಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲಿಸಬೇಕು ಎಂಬುದು ಬಹುತೇಕ ಒಕ್ಕಲಿಗ ಸಮಾಜದ ಹಾಗೂ ಸಾಮಾಜಿಕ ನ್ಯಾಯದಡಿ ಮಾತನಾಡುವ ರಾಜಕೀಯ ನಾಯಕರ ಮಾತಾಗಿದೆ.