ಹಾಸನ: ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಂತೆ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾ ಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ ೧೫ ಮತ್ತು ಜನವರಿ ೨೬ ರಂದು, ರಾಷ್ಟ್ರಧ್ವಜ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ. ಅದೇ ರಾಷ್ಟ್ರಧ್ವಜ ರಸ್ತೆ, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ. ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ ಎಂದರು.
ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜದ ತಯಾರಿಕೆ ನಿಲ್ಲಿಸುವಂತೆ ನ್ಯಾಯಾಲಯವು ಆದೇಶ ನೀಡಿತ್ತು. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಮತ್ತು ಶಿಕ್ಷಣ ಇಲಾಖೆಗಳು ಈ ಸಂಬಂಧ ಸುತ್ತೋಲೆಯನ್ನೂ ಹೊರಡಿ ಸಿದ್ದವು. ಅದರೂ ಸಹ ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡು ವುದು’ ಮಾಡುತ್ತಿದ್ದಾರೆ ಎಂದು ದೂರಿದರು.
ಇತ್ತೀಚೆಗೆ ತ್ರಿವರ್ಣ ಮಾಸ್ಕ್ ಬಳಕೆಯಿಂದ ರಾಷ್ಟ್ರಧ್ವಜದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ’ತ್ರಿವರ್ಣ ಮಾಸ್ಕ್’ ದೇಶಭಕ್ತಿಯ ಪ್ರದರ್ಶನದ ಮಾಧ್ಯಮವಲ್ಲ, ಅಲ್ಲದೇ ಧ್ವಜ ಸಂಹಿತೆಗನುಸಾರ ’ರಾಷ್ಟ್ರಧ್ವಜವನ್ನು ಈ ರೀತಿ ಬಳಸುವುದು’ ಧ್ವಜಕ್ಕೆ ಮಾಡಿದ ಅವಮಾನವೇ ಆಗಿದೆ. ಆದ್ದರಿಂದ ತ್ರಿವರ್ಣ ಮಾಸ್ಕ್ ಮಾರಾಟ ಮಾಡುವ ಮತ್ತು ಬಳಸುವವರ ವಿರುದ್ಧ ಅಪರಾಧಗಳನ್ನು ನಮೂದಿಸಬೇಕು ಎಂದು ಒತ್ತಾಯಿಸಿದರು.
ಗೋವಿಂದ ರಾಜು, ಅನಂತ ರಾಜು, ರಾಜೇಂದ್ರ, ಪವನ್, ಚಂದ್ರಕಲಾ, ವೇದ ಇದ್ದರು.