News Karnataka Kannada
Saturday, May 04 2024
ಹಾಸನ

ಹಾಸನ: ಅರಣ್ಯ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿ ಸಲಗ, ಸಿಸಿ ಕ್ಯಾಮೆರಾದಲ್ಲಿ ಸೆರೆ

Lone tusker caught on CCTV camera chasing forest staff
Photo Credit : News Kannada

ಹಾಸನ: ಮಲೆನಾಡು ಭಾಗವಾದ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಒಂಟಿ ಸಲಗ ಅಟ್ಟಾಡಿಸಿ ರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಕಲೇಶಪುರ ತಾಲೂಕಿನ ಕಿರೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರವೀಣ್ ಎಂಬಾತನನ್ನು ಒಂಟಿಸಲಗ ಕಾಫಿ ತೋಟದಲ್ಲಿ ಅಟ್ಟಾಡಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪ್ರವೀಣ್ ಸ್ವಲ್ಪ ಅಂತರದಲ್ಲಿ ಸಲಗದಿಂದ ಪಾರಾಗಿದ್ದಾರೆ.

ಅರಣ್ಯ ಇಲಾಖೆಯಿಂದ ಕಾಡಾನೆಗಳ ಚಲನವಲನವನ್ನು ಗಮನಿಸಲು ಸಿಬ್ಬಂದಿಗಳನ್ನು ನೇಮಿಸಿದ್ದು ಪ್ರವೀಣ್ ಅವರು ಕರ್ತವ್ಯದಲ್ಲಿ ಇದ್ದಾಗ ಇಂತಹ ಘಟನೆ ನಡೆದಿದೆ.

ಸಕಲೇಶಪುರ ಮತ್ತು ಆಲೂರು ಭಾಗದಲ್ಲಿ ಕಾಡಾನೆಗಳ ಹಿಂಡು ಪದೇಪದೇ ಪ್ರತ್ಯಕ್ಷವಾಗುತ್ತಿದ್ದು ಕಾಫಿ ತೋಟದ ಮಾಲೀಕರು, ರೈತರು ಹಾಗೂ ಗ್ರಾಮಸ್ಥರು ತೀವ್ರ ಆತಂಕದ ದಿನಗಳನ್ನು ದೂಡುವಂತಾಗಿದೆ.

ಹಿಂಡಿನಲ್ಲಿ ಬರುವ ಆನೆಗಳನ್ನು ನಿಯಂತ್ರಿಸಲು ಆಗದೆ ಅರಣ್ಯ ಇಲಾಖೆ ಕೈಚೆಲ್ಲಿ ಕುಳಿತಿದ್ದರೆ. ತಮ್ಮ ಬೆಳೆಗಳನ್ನು ರಕ್ಷಿಸಿ ಕೊಳ್ಳಲು ಆಗದೆ ಪರಿತಪಿಸುತ್ತಿರುವ ಈ ಭಾಗದ ಕಾಫಿ ಬೆಳೆಗಾರರು ಹಾಗೂ ರೈತರು ಸರ್ಕಾರದಿಂದ ಸೂಕ್ತ ಸ್ಪಂದನೆಗೆ ಒತ್ತಾಯಿಸಿದ್ದಾರೆ.

ಹಲವು ವರ್ಷಗಳಿಂದಲೂ ಸಕಲೇಶಪುರ ಮತ್ತು ಆಲೂರು ಭಾಗದಲ್ಲಿ ಕಾಡಾನೆಗಳ ಸಮಸ್ಯೆ ಉಲ್ಬಳಿಸುತ್ತಿದ್ದು ಕೇವಲ ಒಂದೆರಡು ಆನೆಗಳನ್ನು ಸೇರೆ ಹಿಡಿದು ದುಬಾರಿಗಳಿಗೆ ಬಿಡಲಾಗುತ್ತಿದೆ. ಆದರೆ ಇಂತಹ ಕ್ರಮಗಳಿಂದ ಕಾಡನೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುತ್ತಿಲ್ಲ.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂತತಿಯು ಹೆಚ್ಚುತ್ತಿದ್ದು ಸಲಗದ ಹಾವಳಿಯು ಹೆಚ್ಚಿದೆ. ಕಾಡಾನೆ ದಾಳಿಯಿಂದ ಈಗಾಗಲೇ ೭೫ಕ್ಕು ಹೆಚ್ಚು ಮಂದಿಯ ಪ್ರಾಣ ಹಾನಿಯಾಗಿದ್ದು ನೂರಾರು ಎಕರೆ ಬೆಳೆ ನಾಶದೊಂದಿಗೆ ರೈತರು ಸಂಕಷ್ಟದ ದಿನಗಳನ್ನು ದೂಡುವಂತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಕಾಡಾನೆಗಳಿಂದ ಅಗುತ್ತಿರುವ ಸಮಸ್ಯೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಠಿಣ ನಿಲುವನ್ನು ತಾಳಬೇಕು ಎಂದು ಮಲೆನಾಡಿಗರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು