ಅರಕಲಗೂಡು: ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ವಾಸವಿದ್ದ ಮನೆಗೆ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಾಕಿರುವ ಘಟನೆ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಪೊಲೀಸ್ ಠಾಣೆಯಲ್ಲಿ ಸಬ್ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶೋಭಾ ಭರಮಣ್ಣನವರ್ ಕೊಣನೂರು ಗ್ರಾಮದಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದರು. ಮೇ.೨೦ರಂದು ಮೇಲಧಿಕಾರಿಗಳಿಂದ ರಜೆ ಪಡೆದು ಗದಗ ಜಿಲ್ಲೆಯಾಲ್ಲಿರುವ ಸ್ವಂತ ಊರಿಗೆ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದಿರುವುದರನ್ನು ಅರಿತ ದುಷ್ಕರ್ಮಿಗಳು ಹಳೇ ದ್ವೇಷದಂದ ರಾತ್ರಿ ಮನೆಯ ಹಿಂಭಾಗದ ರೂಂನ ಕಿಟಕಿಯ ಗಾಜನ್ನು ಒಡೆದು, ಸೀಮೆಎಣ್ಣೆ ರೂಂನ ಒಳಗೆ ಸುರಿದು, ಬೆಂಕಿ ಹಾಕಿದ್ದರಿಂದ ಒಳಭಾಗದಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಹೋಗಿದೆ. ಈ ಬಗ್ಗೆ ಬೆಳಗ್ಗೆ ವಿಷಯ ಗೊತ್ತಾಗಿ ನೆರೆ ಮನೆಯವರು ಶೋಭಾ ಭರಮಣ್ಣನವರ್ ಅವರಿಗೆ ಮಾಹಿತಿ ನೀಡಿದ್ದಾರೆ.
ಬೆಂಕಿ ಹಾಕಿದ್ದರಿಂದ ರೂಂನಲ್ಲಿದ್ದ ಸುಮಾರು ೮೦ ಸಾವಿರ ಬೆಲೆಬಾಳುವ ಲ್ಯಾಪ್ ಟ್ಯಾಪ್, ೨೫ ಸಾವಿರ ಬೆಲೆ ಬಾಳುವ ಡ್ರೆಸ್ಸಿಂಗ್ ಟೇಬಲ್, ಅದರ ಒಳಭಾಗದಲ್ಲಿದ್ದ ವಸ್ತುಗಳು, ೬೦ಸಾವಿರ ಬೆಲೆಬಾಳುವ ಮರದ ಮಂಚ ಮತ್ತು ಹಾಸಿಗೆ, ವಿವಿಧ ದಾಖಲೆಗಳು ಹಾಗು ಸುಮಾರು ೫೦ಸಾವಿರ ಬೆಲೆಬಾಳುವ ಬಟ್ಟೆಗಳು ಒಟ್ಟು ೨.೧೫ ಲಕ್ಷರೂ. ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ
ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…
ಪುಷ್ಪಾ-2 ರಿಲೀಸ್ ಕ್ರೇಜ್ನಲ್ಲಿರೋ ಐಕಾನ್ ಸ್ಟಾರ್ ಅಲ್ಲು ಅರ್ಜುನ್ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…
ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು ಹತ್ಯೆ…