ಹಾಸನ: ವಿದ್ಯಾರ್ಥಿಗಳಿಗೆ ಶಿಕ್ಷಕರು ವಿಧ್ಯೆಯ ಜತೆ ಉತ್ತಮ ಸಂಸ್ಕೃತಿ, ದೇಶಾಭಿಮಾನ, ಭಾಷಾಭಿಮಾನ ಬೆಳೆಸಬೇಕು. ದೇಶದ ಅಭಿವೃದ್ಧಿಗೆ ಶಿಕ್ಷಣವೇ ಬುನಾದಿ ಎಂದು ಶಾಸಕ ಪ್ರೀತಂ ಜೆ ಗೌಡ ಅಭಿಪ್ರಾಯಪಟ್ಟರು.
ನಗರದ ಎಸ್ಕೆಎಸ್ ಮೆಮೋರಿ ಯಲ್ ಇಂಗ್ಲಿಷ್ ಸ್ಕೂಲ್ನಲ್ಲಿ ನಡೆದ ವಾರ್ಷಿಕ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶಿಕ್ಷಕರು ವಿಧ್ಯೆಯ ಜತೆ ಉತ್ತಮ ಸಂಸ್ಕೃತಿ, ದೇಶಾಭಿಮಾನ, ಭಾಷಾಭಿಮಾನ ಬೆಳೆಸಬೇಕು. ಮಕ್ಕಳ ಭವಿಷ್ಯ ಶಾಲಾ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ. ಉತ್ತಮ ಭವಿಷ್ಯ ರೂಪಿಸಲು ಶಿಕ್ಷಕರೊಂದಿಗೆ ಪೋಷಕರು ಮತ್ತು ಸಮುದಾಯ ಕೈ ಜೋಡಿಸಬೇಕು. ಸಮಾಜದಲ್ಲಿ ಮೂಲಭೂತ ಸೌಕರ್ಯದಷ್ಟೇ ಶೈಕ್ಷಣಿಕ ಅಭಿವೃದ್ಧಿ ಮುಖ್ಯ. ಜನಿಸಿದ ಪ್ರತಿಯೊಂದು ಮಗುವೂ ವಿದ್ಯಾವಂತರಾದರೆ ಇಡೀ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಬಾ. ನಂ. ಲೋಕೇಶ ಮಾತನಾಡಿ ಇಂದು ಮಕ್ಕಳಿಗೆ ಶಿಕ್ಷಣ ಕೊಡಿಸುವಷ್ಟೇ ಕಷ್ಟ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳದ್ದಾಗಿರುತ್ತದೆ. ನಗರದಿಂದ ದೂರದಲ್ಲಿರುವ ಈ ಶಿಕ್ಷಣ ಸಂಸ್ಥೆಗೆ ಬರುವ ಮಕ್ಕಳು ಬಡ ಮತ್ತು ಮಧ್ಯಮ ವರ್ಗದ ಪೋಷಕರ ಮಕ್ಕಳು. ಇಂತಹ ಮಕ್ಕಳಿಗೆ ಶಿಕ್ಷಣ ನೀಡುವುದು ಪುಣ್ಯದ ಕೆಲಸ. ಸುಮಾರು ಎರಡು ದಶಕಗಳಿಂದ ಈ ವ್ಯಾಪ್ತಿಯಲ್ಲಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮಂಜುನಾಥ ವಿದ್ಯಾ ಸಂಸ್ಥೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಸಂಸ್ಥೆಯ ಕಾರ್ಯದರ್ಶಿ ಲೀಲಾವತಿ ನಾಗರಾಜೇಗೌಡ ಮಾತನ್ನಾಡಿ, ನಮ್ಮ ತಂದೆಯವರ ಆಶಯದಂತೆ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿದ್ದೇನೆ. ನಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿ ಗಳು ಇಂದು ವೈದ್ಯರು, ಎಂಜಿನಿ ಯರ್, ಉಪಾಧ್ಯಾಯರು, ವಿಜ್ಞಾನಿ ಗಳು ಇನ್ನಿತರ ಆಡಳಿತಾತ್ಮಕ ಕರ್ತವ್ಯ ನಿರ್ವಹಿಸುತ್ತಿರುವುದು ನಮಗೆ ಹೆಮ್ಮೆಯ ವಿಚಾರವಾಗಿದೆ. ನಮ್ಮಲ್ಲಿ ಕೇವಲ ಪಠ್ಯಕ್ಕೆ ಮಾತ್ರ ಸೀಮಿತ ವಾಗದೆ ಯೋಗ ಧ್ಯಾನ, ಕ್ರೀಡೆ, ಪರಿಸರ ಕಾಪಾಡುವುದು ಸೇರಿದಂತೆ ಇನ್ನಿತರ ಪಠ್ಯತರ ಚಟುವಟಿಕೆ ಗಳಲ್ಲಿಯೂ ಪಾಲ್ಗೊಳ್ಳುವಂತೆ ಮಕ್ಕಳನ್ನು ತರಭೇತುಗೊಳಿಸಿ ಪರಿಪೂರ್ಣ ಶಿಕ್ಷಣವಂತರನ್ನಾಗಿ ಸಲಾಗುವುದು ಎಂದರು.