ಹಾಸನ: ನಮ್ಮ ಡಬಲ್ ಇಂಜಿನ್ ಸರಕಾರವು ರಾಜ್ಯಕ್ಕೆ ಮತ್ತು ಜಿಲ್ಲೆಗೆ ಅನೇಕ ಅಭಿವೃದ್ಧಿ ಕೆಲಸ, ಜನ ಪರ ಯೋಜನೆ ಗಳನ್ನು ಅನುಷ್ಠಾನಕ್ಕೆ ತಂದಿ, ಯಶಸ್ವಿ ಅಧಿಕಾರ ನಡೆಸುತ್ತಿದೆ. ೨೦೨೩ರ ಚುನಾವಣೆಯಲ್ಲಿ ಬಿಜೆಪಿಯು ೧೪೦ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ವನ್ನು ಹೊಂದಿದ್ದೇವೆ ಎಂದು ಶಾಸಕ ಪ್ರೀತಂ ಜೆ ಗೌಡ ಹೇಳಿದರು.
ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತದಲ್ಲಿ ಜಾರಿಗೆ ಬಂದ ಯೋಜನೆಯ ಕಾರ್ಯಕ್ರಮಗಳನ್ನು ಜನರಿಗೆ ಪ್ರೊಜಕ್ಟರ್ ಮೂಲಕ ತಿಳಿಸುವ ಪ್ರಗತಿ ರಥದ ವಾಹನಕ್ಕೆ ಪಕ್ಷದ ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಕ್ಕೆ ಕೊಡುಗೆ ಕೊಟ್ಟಿದ್ದು, ಕಳೆದ ಮೂರುವರೆ ವರ್ಷಗಳಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಈಗಿನ ಹಾಲಿ ಸಿಎಂ ಬಸವರಾಜು ಬೊಮ್ಮಾಯಿರವರ ಕೊಡುಗೆ ಯನ್ನು ನೀಡಿರುವ ಯೋಜನೆಯನ್ನು ಪ್ರತಿ ಮನೆ ಮನೆಗೂ ತಿಳಿಸುವ ಉದ್ದೇಶ ದಿಂದ ಪ್ರಗತಿ ವಾಹನವನ್ನು ನಗರದಲ್ಲಿ ಚಾಲನೆ ಕೊಡಲಾಗಿದೆ ಎಂದರು.ಸರ ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ಭಾಗಗಳಿಗೂ ವಾಹನ ತೆರಳಿ ಪ್ರಚಾರ ಮಾಡಲಿದೆ. ಸರಕಾರದ ಎಲ್ಲಾ ಯೋಜನೆಗಳನ್ನು ಒಳಗೊಂಡ ಕಿರುಚಿತ್ರವನ್ನು ಈ ಪ್ರಗತಿ ರಥದಲ್ಲಿ ತಿಳಿಸಲಾಗು ವುದು. ೨೦೨೩ರ ಚುನಾವಣೆಯಲ್ಲಿ ಬಿಜೆಪಿಯು ೧೪೦ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಂಕಲ್ಪವನ್ನು ಹೊಂದಿ ದ್ದು, ಅದರ ನಾಂದಿಯನ್ನು ಈರಥದ ಮೂಲಕ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಗ್ರಾಮಾಂತರ ಉಪಾಧ್ಯಕ್ಷರಾದ ಗುರುಪ್ರಸಾದ್, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹರ್ಷಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಹುಲ್ ಕಿಣಿ, ಗೋಪಿನಾಥ್, ಮುರುಳಿ, ಚಂದ್ರಶೇಖರ್, ದರ್ಶನ್, ಪ್ರೀತಿವರ್ಧನ್ ಇತರರು ಉಪಸ್ಥಿತರಿದ್ದರು.