News Karnataka Kannada
Thursday, May 02 2024
ಹಾಸನ

ಹಾಸನ : ಜ.೨೧ ಕ್ಕೆ ಹಾಸನಕ್ಕೆ ಪ್ರಜಾ ಧ್ವನಿ ಯಾತ್ರೆ

Hasan (1)
Photo Credit : By Author

ಹಾಸನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ ೨೧ರಂದು ಪ್ರಜಾದ್ವನಿ ಬಸ್ ಯಾತ್ರೆ, ಹಾಸನಕ್ಕೆ ಆಗಮಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಧ್ಯಮ ವಕ್ತಾರ ದೇವರಾಜೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಸೇರಿದಂತೆ ಬೆಲೆ ಏರಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಸ್ ಯಾತ್ರೆ ಹಾಸನಕ್ಕೆ ಆಗಮಿಸುತ್ತಿದೆ.

ನಗರದ ಎಲ್ ವಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸಮಾರಂಭ ಪ್ರಾರಂಭವಾಗಲಿದ್ದು ಸುಮಾರು ಒಂದು ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಈ ಸಮಾರಂಭದಲ್ಲಿ ಕಾರ್ಯ ಧ್ಯಕ್ಷರಾದ ಧ್ರುವನಾರಾಯಣ್ ,ಜಿಲ್ಲಾ ಉಸ್ತುವಾರಿ ಡಿ.ಕೆ ಸುರೇಶ್ ಕೆ ಹೆಚ್ ಮುನಿಯಪ್ಪ , ಹರಿಪ್ರಸಾದ್ ಸೇರಿದಂತೆ ಹಲವು ರಾಜ ನಾಯಕರು ಭಾಗವಹಿ ಸಲಿದ್ದಾರೆ.

ಈ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಇತರೆ ಪಕ್ಷದ ನಾಯಕರು ಹಾಗೂ ಶಾಸಕರ ಬಗ್ಗೆ ಮಾಹಿತಿ ಬಹಿರಂಗವಾಗಲಿದೆ ಎಂದು ಹೇಳಿದರು .

ನಾ ನಾಯಕಿ ಕಾರ್ಯಕ್ರಮಕ್ಕೆ ಜಿಲ್ಲೆಯ ಮಹಿಳಾ ಮುಖಂಡರು
ಇಂದು ರಾಜಧಾನಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ನೇತೃತ್ವದಲ್ಲಿ ನಾ ನಾಯಕಿ ಸಮಾರಂಭ ಆಯೋಜನೆಗೊಂಡಿದ್ದು ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ವಿಶೇಷ ಪ್ರಣಾಳಿಕೆಯನ್ನು ಪಕ್ಷ ಬಿಡುಗಡೆ ಮಾಡುತ್ತಿದೆ ಎಂದರು.

ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಪ್ರತಿ ತಾಲೂಕಿನಿಂದ ೩೦೦ ರಿಂದ ೫೦೦ ಮಂದಿ ಪ್ರಮುಖ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್ ವಿಧಾನಪರಿಷತ್ ಮಾಜಿ ಸದಸ್ಯ ಎಚ್ ಕೆ ಜವರೇಗೌಡ , ಸಮ್ಮದ್ , ಅಶೋಕ್, ಶಿವಕುಮಾರ್ ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು