ಹಾಸನ: ನಿವೃತ್ತ ಅಂಗನ ವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಗ್ರಾಜ್ಯುಟಿ ಹಾಗೂ ಮಾಸಿಕ ಪೆನ್ಷನ್ ಜಾರಿಗೊಳಿ ಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯ ಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಕಳೆದ ೪೮ ವರ್ಷಗಳಲ್ಲಿ ಸುಮಾರು ೨೦ ರಿಂದ ೩೦ ವರ್ಷಗಳ ಕಾಲ ನಿರಂತರವಾಗಿ ದುಡಿದು ನಿವೃತ್ತ ರಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ .ವೃದ್ಧಪ್ಯಾ ಜೀವನವನ್ನು ಅತ್ಯಂತ ಕಠಿಣ ಆರ್ಥಿಕ ಪರಿಸ್ಥಿತಿಯಲ್ಲಿ ನಡೆ ಸುತ್ತಿರುವ ಇವರಿಗೆ ಸರ್ಕಾರದಿಂದ ಸಹಾಯ ಹಸ್ತಾ ಬೇಕಿದೆ ಎಂದು ಆಗ್ರಹಿಸಿದರು.
ಕೇವಲ ಕನಿಷ್ಠ ಗೌರವ ಧನ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಆರು ವರ್ಷ ವಯೋಮಾನದೊಳಗಿನ ಮಕ್ಕಳು ಮತ್ತು ಅವರ ತಾಯಂದಿರ ಪೌಷ್ಟಿಕ ಆಹಾರ ಆರೋಗ್ಯ ರಕ್ಷಣೆ , ಶಾಲಾ ಪೂರ್ವ ಶಿಕ್ಷಣದ ಜವಾಬ್ದಾರಿ ಯನ್ನು ನಿರ್ವಹಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಯ ರೂವಾರಿಗಳಾಗಿದ್ದರು ಸಹ ಅಂಗನ ವಾಡಿ ಉದ್ಯೋಗಿಗಳಿಗೆ ಸರ್ಕಾರ ಗಳು ಅವರ ಕ್ಷೇಮಾಭಿವೃದ್ಧಿಯ ಬಗ್ಗೆ ಯಾವುದೇ ಕಾಳಜಿಯನ್ನು ತೊರದೆ ನಿರ್ಲಕ್ಷ್ಯ ಸಿರುವುದು ಸರಿಯಲ್ಲ ಎಂದು ದೂರಿದರು .
ಈಗಾಗಲೇ ವಯೋ ಸಹಜ ಕಾಯಿಲೆಗಳಿಂದ ನಿವೃತ್ತರು ರಕ್ತದೊತ್ತಡ ,ಮಧುಮೇಹ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದು ಔಷಧೋಪಚಾರಕ್ಕೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ ಆದ್ದರಿಂದ ಸರ್ಕಾರ ನಿವೃತ್ತ ಅಂಗನವಾಡಿ ಕಾರ್ಯ ಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಕನಿಷ್ಠ ಮಾಸಿಕ ಪಿಂಚಣಿ ನೀಡುವ ಮೂಲಕ ಸಹಾಯ ಹಸ್ತ ಚಾಚಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಗ್ರಾಚ್ಯುಟಿ ಸೌಲಭ್ಯವನ್ನು ಶಾಸನಾತ್ಮಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇ ಕೆಂದು ಒತ್ತಾಯಿಸಿ ಮಹಾತ್ಮ ಗಾಂ ಧಿಯವರ ಸಂಸ್ಮರಣಾ ದಿನವಾದ ಇಂದು ಪ್ರತಿಭಟನೆ ನಡೆಸುವ ಮೂ ಲಕ ಗಮನ ಸೆಳೆಯಲಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳಾದ ಜಯ ಲಕ್ಷ್ಮಿ, ನೇತ್ರಾವತಿ, ನಾಗರತ್ನಮ್ಮ ,,ಲತಾ , ನಾಗರತ್ನ ಸೇರಿದಂತೆ ಹಲವು ಮಹಿಳಾ ಸದಸ್ಯರು ಭಾಗವಹಿಸಿದ್ದರು.