News Karnataka Kannada
Sunday, May 05 2024
ಹಾಸನ

ಹಾಸನ: ರೈತ ಸಂಘದಿಂದ ಬೆಂಗಳೂರು ಚಲೋ, ಬೇಡಿಕೆ ಈಡೇರಿಸುವಂತೆ ಆಗ್ರಹ

Farmers
Photo Credit : Twitter

ಹಾಸನ: ರೈತರ ಬಗರ್ ಹುಕುಂ ಸಾಗುವಳಿ ಭೂಮಿಗೆ ಮಂಜೂರಾತಿ ಪತ್ರ ನೀಡಿ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದ ರಾಜ್ಯ ಸಂಚಾಲಕರ ನೇತೃತ್ವದಲ್ಲಿ ಗ್ರೇಡ್ 2 ತಹಶೀಲ್ದಾರ್ ಪಾಲಾಕ್ಷ ಅವರಿಗೆ ರೈತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಬೆಂಗಳೂರು ಚಲೋ ಪದ ಯಾತ್ರೆಗೆ ಹಸಿರು ನಿಶಾನೆ ತೋರಿಸಲಾಯಿತು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಕಣಕೆಂಚೇನಹಳ್ಳಿ ಪ್ರಸನ್ನಕುಮಾರ್ ಅವರು ತಾಲೂಕಿನ ಹಾರನಹಳ್ಳಿ ಸಮೀಪದ ಕಣಕೆಂಚೇನಹಳ್ಳಿ ಗ್ರಾಮದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಸಿದ್ದೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ರೈತ ಮುಖಂಡರು ಗ್ರೇಡ್ 2 ತಹಶೀಲ್ದಾರ್ ಪಾಲಾಕ್ಷ ಅವರಿಗೆ ರೈತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಔಪಚಾರಿಕವಾಗಿ ಚಾಲನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು