ಹಾಸನ: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ನಾನು ಐವತ್ತು ಸಾವಿರ ಲೀಡ್ನಲ್ಲಿ ಗೆಲ್ಲುತ್ತೇನೆ ಎಂದು ಹೇಳಿರುವ ಪ್ರೀತಂ ಗೌಡ ಅವರ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ನಗರದ ಹಾಸನಾಂಬ ದೇವಾಲಯ ಆವರಣದಲ್ಲಿ ಸವಿತಾ ಸಮಾಜದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು ನಮ್ಮ ಕುಟುಂಬ ಪ್ರೀತಮ್ ಗೌಡ ಅವರ ಸವಾಲಿಗೆ ರೆಡಿ ಇದೆ ನಮಗೆ ಯಾರೇ ಸವಾಲು ಹಾಕಿದರು ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧವಿದ್ದು ಹೆದರಿ ಓಡಿ ಹೋಗುವ, ಸವಾಲಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಭವಾನಿ ರೇವಣ್ಣ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಸುಳಿವು ನೀಡಿದರು.
ಹಾಸನ ವಿಧಾನಸಭಾ ಕ್ಷೇತ್ರ ದಿಂದ ಜೆಡಿಎಸ್ನ ಅಭ್ಯರ್ಥಿ ಅಂತಿಮಗೊಳಿ ಸುವ ವಿಚಾರವಾಗಿ ಇನ್ನು ಹತ್ತು ದಿನಗಳಲ್ಲಿ ಯಾರ ಕೈಯಿಂದ ಏನು ಹೇಳಿಸಬೇಕು ಅದನ್ನು ಯಶಸ್ವಿಯಾಗಿ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.
ಶಾಸಕ ಪ್ರೀತಂ ಗೌಡ ಇನ್ನು ಹತ್ತು ಸವಾಲು ಹಾಕಲಿ ಚುನಾವಣೆಗೆ ನಾವು ರೆಡಿ ಎಂದು ಸವಾಲು ಹಾಕಿದರು. ಮುಂದಿನ ೧೦ ದಿನಗಳಲ್ಲಿ ಹಾಸನ ಜಿಲ್ಲೆಯ ಎಲ್ಲಾ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ.
ಅರಕಲಗೂಡು ವಿಧಾನ ಸಭಾ ಕ್ಷೇತ್ರದಲ್ಲಿ ಎ. ಟಿ ರಾಮಸ್ವಾಮಿ ಅವರನ್ನು ಕಣಕ್ಕಿಳಿಸುವ ಕುರಿತು ದೊಡ್ಡವರು ಮಾತುಕತೆ ಮಾಡಲಿದ್ದಾರೆ ಎಂದು ತಿಳಿಸಿದರು . ಜಿಲ್ಲೆಯ ಸವಿತ ಸಮಾಜಕ್ಕೆ ಜೆಡಿಎಸ್ ಪಕ್ಷದಿಂದ ಹಲವು ಸಹಕಾರವನ್ನು ನೀಡಿದ್ದು ಪ್ರತಿ ತಾಲೂ ಕಿನಲ್ಲಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಧನ ಸಹಾಯ ಮಾಡಿದ್ದು ಬಹುತೇಕ ತಾಲೂ ಕಿನಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು ಎಲ್ಲ ರೀತಿಯ ಸಹಾಯ ಮಾಡುವುದಾಗಿ ಸ್ಪಷ್ಟಪಡಿಸಿದರು.