Categories: ಹಾಸನ

ಹಾಸನ : ಸಿಮೆಂಟ್ ನೆಪದಲ್ಲಿ ೬ ಲಕ್ಷ ರೂ, ಕಿತ್ತ ವಂಚಕ

ಹಾಸನ : ಸಿಮೆಂಟ್ ಕೊಡಿಸುವುದಾಗಿ ನಂಬಿಸಿ ಖಾತೆಗೆ ಹಣ ವರ್ಗಾಯಿಸಿಕೊಂಡು ಅಪರಿಚಿತನಿಂದ ವಂಚನೆಯಾಗಿರುವ ಘಟನೆ ನಡೆದಿದೆ.

ಕೇರಳಾಪುರದ ಮಂಜುನಾಥ್ ಸಿಮೆಂಟ್ ವ್ಯಾಪಾರ ಮಾಡಲು ಆನ್‌ಲೈನ್‌ನಲ್ಲಿ ಸರ್ಚ್ ಮಾಡುತ್ತಿದ್ದಾಗ ಅಂಬುಜ ಸಿಮೆಂಟ್ ಲಿಮಿಟೆಡ್ ಹೆಸರಿನಲ್ಲಿ ಸಿಕ್ಕಿದ ಮೊಬೈಲ್ ನಂಬರ್‌ಗೆ ಕರೆ ಮಾಡಿದ್ದಾರೆ.

ಅಪರಿಚಿತ ವ್ಯಕ್ತಿ ಸಿಮೆಂಟ್ ನೀಡುವ ಭರವಸೆಯೊಂದಿಗೆ ಕಂಪನಿಯ ನಿಯಮದಂತೆ ೨೫ ಸಾವಿರ ರೂ, ರಿಜಿಸ್ಟ್ರೆ ಷನ್ ಫೀಸ್ ಮತ್ತು ೧ಲಕ್ಷ ಡಿಪಾಸಿಟ್ ಇಡಬೇಕೆಂದು ಹಾಗು ಕನಿಷ್ಟ ೧೫೦೦ ಚೀಲ ಸಿಮೆಂಟ್ ಖರೀದಿಸಬೇಕೆಂದು ತಿಳಿಸಿದ್ದಾರೆ. ವ್ಯವಹಾರದ ಮಾಹಿತಿಗಳನ್ನು ವಾಟ್ಸಪ್ ಮೂಲಕ ಅಪರಿಚಿತನ ವ್ಯಕ್ತಿಗೆ ನೀಡಿದರು.

ಕೆನರಾ ಬ್ಯಾಂಕ್‌ನ ಖಾತೆ ಸಂಖ್ಯೆಯಿಂದ ಅಂಬುಜ ಸಿಮೆಂಟ್ ಲಿಮಿಟೆಡ್‌ನ ಖಾತೆಸಂಖ್ಯೆಗೆ ನೆಫ್ಟ್ ಮೂಲಕ ೧,೨೫ ಲಕ್ಷ ರೂ,ಗಳನ್ನು ವರ್ಗಾವಣೆ ಮಾಡಿದ್ದಾರೆ. ಕೆನರಾ ಬ್ಯಾಂಕ್ ಖಾತೆಯಿಂದ ಅಂಬುಜ ಸಿಮೆಂಟ್ ಲಿಮಿಟೆಡ್‌ನ ಹೆಚ್.ಡಿ.ಎಫ್.ಸಿ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಒಂದು ಬಾರಿ ೨,೪೧,೮೪೦ ರೂ, ಹಾಗೂ ಇನ್ನೊಂದು ಬಾರಿ
೨,೮೬,೮೪೦ ರೂ. ಗಳನ್ನು ವರ್ಗಾವಣೆ ಮಾಡಿದ್ದು, ಒಟ್ಟು ೬,೫೩,೬೮೦ ರೂ,ಗಳನ್ನು ಅಪರಿಚಿತ ವ್ಯಕ್ತಿಯು ಮೋಸದಿಂದ ವರ್ಗಾವಣೆ ಮಾಡಿಸಿಕೊಂಡಿದ್ದು, ಸಿಮೆಂಟ್ ಕೊಡದೇ ಹಾಗೂ ಹಣವನ್ನು ವಾಪಸ್ ಕೊಡದೇ ವಂಚಿಸಲಾಗಿದೆ.
ಹಾಸನದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Sneha Gowda

Recent Posts

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

8 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

25 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

43 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago