ಹಾಸನ: ಗ್ರಾಮೀಣ ಕ್ರೀಡಾ ಕೂಟ ಎಂದರೆ ನಮಗೆ ದಸರಾ ನೆನಪಾಗುತ್ತದೆ. ನಮ್ಮ ಗ್ರಾಮೀಣ ಸೋಬಗನ್ನು ಹೆಚ್ಚಿಸುವಂತಹ ಖೋಖೋ, ಕಬಡ್ಡಿ ಎತ್ತಿನಗಾಡಿ ಓಟ ಸ್ಪರ್ದೆಳಾಗಳಿಗೆ ಏರ್ಪಡಿ ಸಿದ್ದಾರೆ ಸ್ಪರ್ಧಾಳುಗಳೆಲ್ಲರಿಗೂ ಶುಭವಾಗಲಿ ಎಂದು ಶಾಸಕರಾದ ಪ್ರೀತಂ ಜೆ ಗೌಡ ಅವರು ಹೆಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಗ್ರಾಮೀಣ ಅಭಿವೃದಿ ಮತ್ತು ಪಂಚಾಯತ್ ರಾಜ್ ಇಲಾಖೆ ಇವರ ವತಿಯಿಂ ದ ಜಿಲ್ಲಾ ಕ್ರೀಡಾಗಣದಲ್ಲಿಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡಾ ಪಟ್ಟುಗಳಿಗೆ ಸಿಕ್ಕಂತ ಅವಕಾಶ ಬಳಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಅವರು ಮಾತನಾಡಿ ಕ್ರೀಡೆ ಎಂಬುವುದು ಈಗ ಎರಡು ಮೂರು ಆಟಗಳಿಗೆ ಮಾತ್ರ ಸೀಮಿತವಾಗಿದೆ. ಈಗಿನ ಮಕ್ಕಳಿಗೆ ಗ್ರಾಮೀಣ ಆಟಗಳೆ ಮರೆತು ಹೋಗಿದೆ ಈ ನಿಟ್ಟಿನಲ್ಲಿ ಗ್ರಾಮೀಣ ಅಭಿವೃದ್ದಿ ಇಲಾಖೆಯವರು ಇಂತಹ ಕ್ರೀಡಾಕೂಟವನ್ನು ಏರ್ಪಡಿಸಿ ಪ್ರೋತ್ಸಾಹ ನೀಡುತ್ತಿರು ವುದು ಉತ್ತಮ ಬೆಳವಣಿಗೆ ಎಂದರು.
ಹಿಂದೆ ಗ್ರಾಮೀಣ ಭಾಗದಲ್ಲಿ ಕ್ರೀಡಗಳನ್ನು ವಿಶೇಷ ದಿನಗಳಲ್ಲಿ ಮನೋರಂಜನೆಗಾಗಿ ಆಡುತ್ತಾ ಕ್ರೀಡಾ ಕೂಟಗಳನ್ನು ಏರ್ಪಡಿಸುತ್ತಿದ್ದರು. ಇಂದು ಕಣ್ಮರೆಯಾಗುತ್ತಿದೆ ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿ ಸಲು ಇಂತಹ ಕ್ರೀಡಾಕೂಟಗಳನ್ನು ನೆರವಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಾಕಾರ್ಯನಿರ್ವಾಹಣಾಧಿಕಾರಿ ಕಾಂತರಾಜ್ ಅವರು ಮಾತನಾಡಿ ಗ್ರಾಮೀಣ ಮಟ್ಟದಲ್ಲಿ ಇರುವಂತಹ ಕ್ರೀಡಾ ಪ್ರತಿಭೆಗೆ ಪ್ರೋತ್ಸಾಹಿಸಬೇಕು. ಎಂಬ ಹಿನ್ನಲೆಯಲ್ಲಿ ನಮ್ಮ ಜಿಲ್ಲೆಯ ೨೬೭ ಗ್ರಾಮ ಪಂಚಾಯತಿ ಮಟ್ಟದ ಲ್ಲಿಯೂ ಕೂಡ ಕಾರ್ಯ ಕ್ರಮಗಳನ್ನು ರೂಪಿಸಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸ್ಪರ್ದೆ ನಡೆಸಿ ಆ ಭಾಗದ ಎಲ್ಲಾ ಸಾರ್ವಜನಿಕರಿಗೂ ಕೂಡ ಕ್ರೀಡಾಕೂಟದಲ್ಲಿ ಭಾಗವ ಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದರು.
ಗ್ರಾಮೀಣ ಭಾಗದಲ್ಲಿ ಯುಗಾದಿ, ಸಂಕ್ರಾತಿ ಹಬ್ಬಗಳನ್ನು ಮಾಡುವಂತಹ ಸಂದಭದಲ್ಲಿ ಗ್ರಾಮದ ಜನಗಳು ಸೇರಿ ಆಟ ವಾಡುವಂತದ್ದು ಇತ್ತಿಚಿನ ದಿನಗ ಳಲ್ಲಿ ಕಡಿಮೆಯಾಗುತ್ತಿದೆ ಗ್ರಾಮೀಣ ಕ್ರೀಡೆಗಳುನಶಿಸಿ ಹೋಂಗದಂತೆ ಪ್ರೋತ್ಸಾಹ ನೀಡಿ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರರಾದ ಹರೀಶ್ ಹಾಗೂ ಮತ್ತಿತರರು ಹಾಜರಿದ್ದರು.
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…