ಹಾಸನ, ನ.12: ಎರಡನೇ ಮದುವೆ ಆಗಲು ಹೊರಟಿದ್ದ ಪತಿಯನ್ನು ಮೊದಲ ಪತ್ನಿ ಕಲ್ಯಾಣ ಮಂಟಪದಲ್ಲೇ ತಡೆದ ಘಟನೆ ಹಾಸನದಲ್ಲಿ ನಡೆದಿದೆ.
ಕಿರಣ್ ಎಂಬ ಯೋಧ ನ.10ರಂದು ನಗರದ ಬೂವನಹಳ್ಳಿ ಬೈಪಾಸ್ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮದುವೆಯಾಗುತ್ತಿದ್ದ. ಈ ಸಂದರ್ಭ ಅಲ್ಲಿಗೆ ಪೊಲೀಸರೊಂದಿಗೆ ಬಂದ ಆಶಾ ಎಂಬಾಕೆ ತಾನು ಮತ್ತು ಕಿರಣ್ ಈಗಾಗಲೇ ಮದುವೆ ಆಗಿದ್ದು, ಈಗ ನನ್ನನ್ನು ವಂಚಿಸಿ ಮತ್ತೊಂದು ಮದುವೆಯಾಗಲು ಹೊರಟಿದ್ದಾನೆ ಎಂದು ಆರೋಪ ಮಾಡಿದ್ದಾಳೆ.
2ನೇ ಹುಡುಗಿಗೆ ತಾಳಿ ವಾಪಸ್ ಕೊಟ್ಟು ಹೋಗಿದ್ದಾಳೆ. ರಾಜಿ ಸಂಧಾನದ ನಂತರ ಕಿರಣ್ ಮನೆಗೆ ಹೊರಟವನೇ ಮತ್ತೆ ಆಶಾಳನ್ನು ಸಂಪರ್ಕಿಸಿದ್ದಾನೆ. ಇಬ್ಬರ ನಡುವೆ ಮನಸ್ತಾಪವೇರ್ಪಟ್ಟಿದ್ದು, ನಂತರ ಶಾಂತಿಗ್ರಾಮ ಸಮೀಪದ ಹೊಂಗೆರೆ ಬಳಿಯ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಇಬ್ಬರೂ ನೇಣು ಬಿಗಿದುಕೊಂಡಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು