ಹಾಸನ: ಉಪಕರಣಗಳ ಸಮೇತ ಮಸೀದಿಗೆ ನುಗ್ಗಿದ ಖತರ್ನಾಕ್ ಕಳ್ಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ.
ತಡರಾತ್ರಿ ಖುಬಾ ಮಸೀ ದಿಗೆ ಬಂದಿರುವ ಕಳ್ಳ ಕೆಲಕಾಲ ಹೊಂಚು ಹಾಕಿದ್ದಾನೆ. ನಂತರ ಗೇಟ್ ಹಾರಿ ಒಳಬಂದಿರುವ ಚೋರ ಮಸೀದಿಯ ಮುಖ್ಯದ್ವಾರದ ಬೀಗ ಮುರಿದು ಹುಂಡಿ ಕದಿಯಲು ಯತ್ನಿಸಿದ್ದಾನೆ. ಇದು ಸಾಧ್ಯವಾಗದಿದ್ದಾಗ ಮಸೀದಿಯ ಕಚೇರಿಯ ಬೀಗ ಮುರಿದು ಒಳ್ಳನುಗ್ಗಿದ್ದಾನೆ. ಅಲ್ಲಿದ್ದ ಕಂಪ್ಯೂಟರ್ ಹಾಗೂ ಕೆನಾನ್ ಕ್ಯಾಮೆರಾವನ್ನು ಕದ್ದೊಯ್ದಿದ್ದಾನೆ.
ಕಳ್ಳತನದ ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ೩ ಲಕ್ಷ ರೂ. ಬೆಲೆಬಾಳುವ ಕಂಪ್ಯೂಟರ್, ಕ್ಯಾಮೆರಾ ಕಳುವಾಗಿದೆ. ರಾತ್ರಿ ಮಳೆ ಬರುತ್ತಿದ್ದ ಕಾರಣ ಪ್ರಮುಖ ಪತ್ರಿಕೆಯ ಛಾಯಾಗ್ರಾಹಕ ಅತೀಕ್ ಉರ್ ರೆಹಮಾನ್ ತಮ್ಮ ಕ್ಯಾಮೆರಾವನ್ನು ಮಸೀದಿಯ ಕಚೇರಿಯಲ್ಲಿಟ್ಟು ಮನೆಗೆ ತೆರಳಿದ್ದರು. ಆ ಕ್ಯಾಮೆರಾದೊಂದಿಗೆ ಕಳ್ಳ ಎಸ್ಕೇಪ್ ಆಗಿದ್ದಾನೆ.
ಕಳೆದ ೩ ತಿಂಗಳ ಅವಧಿಯಲ್ಲಿ ಇದೇ ಮಸೀದಿಯಲ್ಲಿ ೩ ಬಾರಿ ಕಳ್ಳತನವಾಗಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…