ಹಾಸನ

ಹಾಸನ: ವರದಕ್ಷಿಣೆ ಕಿರುಕುಳ, ಮಹಿಳೆಯ ಕೊಲೆ

ಹಾಸನ: ಜೂಜು ಆಟದಲ್ಲಿ ಹಣ ಕಳೆದುಕೊಂಡು ಮನೆಯಲ್ಲಿದ್ದ ಮಡದಿ ಒಡವೆಯನ್ನು ಕೂಡ ಮಾರಿ ನಂತರ ತವರು ಮನೆಯಿಂದ ಹಣ ತರುವಂತೆ ಹೆಂಡತಿ ಹೆಚ್.ಎಂ. ರಂಜಿತ (೨೩ ವರ್ಷ) ಎಂಬುವರಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಗುಡ್ಡೆಗೌಡನಹಳ್ಳಿ ಕೊಪ್ಪಲುನಲ್ಲಿ ನಡೆದಿದೆ.

ಅರಕಲಗೂಡು ತಾಲೂಕು ಹೆಂಟಗೆರೆ ಕೊಪ್ಪಲು ಗ್ರಾಮದ ಮಂಜೇಗೌಡ ಎಂಬುವರ ಮಗಳಾದ ಅರ್ಪಿತಾ ರಂಜಿತಾ ಅವರನ್ನು ೨೦೨೨ ಮೇ. ೯ ರಂದು ವಿದ್ಯಾನಗರ ಬಳಿ ಇರುವ ಗುಡ್ಡೇಗೌಡನಹಳ್ಳಿ ಗ್ರಾಮದ ಸ್ವಾಮೀಗೌಡ ಎಂಬುವರ ಮಗ ಯು.ಟಿ. ಪವನ್ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ೨೫೦ ಗ್ರಾಂ. ಚಿನ್ನದ ವಡವೆ ಹಾಗೂ ೨ ಲಕ್ಷ ರೂ. ನಗದು ಹಣ ನೀಡಿದ್ದರು. ಇದಾದ ನಂತರ ೨-೩ ತಿಂಗಳು ರಂಜಿತಾಳನ್ನು ಗಂಡನ ಮನೆಯವರು ಚೆನ್ನಾಗಿ ನೋಡಿಕೊಂಡಿದ್ದರು. ನಂತರ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡಲು ಪ್ರಾರಂಭಿಸಿದರು ಎನ್ನಲಾಗಿದೆ.

ಪವನನಿಗೆ ಇಸ್ಪೀಟ್ ಮತ್ತು ಐಪಿಎಲ್ ಕ್ರಿಕೆಟ್ ಜೂಜಾಡುವ ಹವ್ಯಾಸವಿದ್ದು, ರಂಜಿತಾಳಿಗೆ ಆಗಾಗ್ಗೆ ವರದಕ್ಷಿಣೆ ತರುವಂತೆ ಹೊಡೆದು, ಹೊರಗೆ ಕಳಿಸುತ್ತಿದ್ದ ಎನ್ನಲಾಗಿದೆ. ೨ ತಿಂಗಳ ಹಿಂದೆ ಅಂದರೆ ಕಳೆದ ಮಾ.೧೦ ಅರ್ಪಿತಾ ತವರು ಮನೆಗೆ ಬಂದು, ಗಂಡನ ಮನೆಗೆ ಹೋಗುವುದಿಲ್ಲ, ನನ್ನನ್ನು ಹೊಡೆದು ಸಾಯಿ ಸುತ್ತಾರೆಂದು ಹೇಳಿದ್ದಾಳೆ. ನಂತರ ಸಂಬಂಧಿಕರೆಲ್ಲರೂ ಸೇರಿ ರಾಜಿ ಪಂಚಾಯ್ತಿ ಮಾಡಿ ಸಮಧಾನ ಮಾಡಲಾಗಿತ್ತು. ಆದರೂ ಮೇ ೨ ರಂದು ಮಧ್ಯಾಹ್ನ ರಂಜಿತಳನ್ನು ಗಂಡ ಪವನ್, ಅತ್ತೆ ಮಣಿ, ಮಾವ ತಿಮ್ಮೇಗೌಡ, ಸ್ವಾಮೀಗೌಡ ಎಂಬವರು ಮನ ಬಂದಂತೆ ಹಲ್ಲೆ ಮಾಡಿ ನಂತರದಲ್ಲಿ ಆಸ್ಪತ್ರೆಗೆ ಸೇರಿಸಿದ್ದರು. ಮಂಗಳವಾರ ಸಂಜೆ ೬.೪೫ ರ ಸುಮಾರಿಗೆ ಗಂಭೀರ ಗಾಯಗೊಂಡಿದ್ದ ರಂಜಿತಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ವಿಷಯ ತಿಳಿದ ಮೃತರ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಈಕೆಯ ಸಾವಿಗೆ ಕಾರಣರಾದ ಗಂಡ ಪವನ್, ಅತ್ತೆ ಮಣಿ, ಮಾವ ತಿಮ್ಮೇಗೌಡ ಸ್ವಾಮೀಗೌಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಂಬಂಧಿಕರು ಪೆನೆನ್ ಮೊಹಲಾ ಪೊಲೀಸರಿಗೆ ಠಾಣೆಗೆ ದೂರು ದಾಖಲಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago