ಹಾಸನ: ಅಯೋಧ್ಯೆ ರಾಮ ಮಂದಿರಕ್ಕೆ ನಾನು ಕುಟುಂಬ ಸಹಿತವಾಗಿ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
ಅವರು ಹಾಸನದಲ್ಲಿ ಮಾತನಾಡಿ, ನಾನು, ನನ್ನ ಪತ್ನಿ, ಮಗ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್ ಹೋಗುತ್ತೇವೆ ಎಂದರು. ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ. ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ. ಎಸ್ ಎಂ ಕೃಷ್ಣ, ಡಿಕೆ ಶಿವಕುಮಾರ್, ನಾನು ನಮ್ಮ ಸ್ವಾಮಿಜಿ ಎಲ್ಲರೂ ಭಾಗಿಯಾಗುತ್ತೇವೆ ಎಂದರು.