Categories: ಹಾಸನ

ಹೊಳೆನರಸೀಪುರ: ಜಲ ಜೀವನ್ ಮಿಷನ್ ಯೋಜನೆಯಡಿ ವಸ್ತು ಪ್ರದರ್ಶನ

ಹೊಳೆನರಸೀಪುರ: ತಾಲ್ಲೂಕು ಪಂಚಾಯಿತಿ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ-ವಿಭಾಗ ಹೊಳೆನರಸೀಪುರ ಹಾಗೂ ಹಳೆಕೋಟೆ ಗ್ರಾಮ ಪಂಚಾಯಿತಿ ಇವರ ಸಹಯೋಗದೊಂದಿಗೆ ಮಾವಿನಕೆರೆ ಗ್ರಾಮದಲ್ಲಿ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಜಲ ಜೀವನ್ ಮಿಷನ್ ಯೋಜನೆಯಡಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಯಾದ ಶ್ರೀಯುತ ಗೋಪಾಲ್ ರವರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯು ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೆ ೫೫.ಲೀ ನಂತೆ ಪ್ರತಿ ಕುಟುಂಬಕ್ಕೆ ಶುದ್ದ ನೀರು ಒದಗಿಸುವುದು ಯೋಜನೆಯ ಮೂಲ ಉದ್ದೇಶವಾಗಿದೆ. ಇದರ ಭಾಗವಾಗಿ ಗ್ರಾಮೀಣ ಭಾಗದ ಜನರಿಗಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು ಹಾಗೂ ನೀರಿನ ಮಿತಬಳಕೆ ಬಗ್ಗೆ ಅರಿವು ಮೂಡಿಸಲು ಯೊಜನೆಯ ಪೂರ್ಣ ಮಾಹಿತಿ ತಿಳಿಯಲು ಜಲ ಜೀವನ್ ಮಿಷನ್ ವಸ್ತು ಪ್ರದರ್ಶನದಿಂದ ಸಹಕಾರಿಯಾಗಲಿದೆ.

ಜಾತ್ರಾ ಮಹೋತ್ಸವ ಅಂಗವಾಗಿ ೦೩ ದಿವಸಗಳ ಕಾಲ ವಸ್ತು ಪ್ರದರ್ಶನ ನಡೆಯಲಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದರು. ನೆರೆದಿದ್ದ ಗ್ರಾಮಸ್ಥರಿಗೆ ಹಣ್ಣಿನ ಗಿಡಗಳನ್ನು ವಿತರಸಿ ಗ್ರಾಮಸ್ಥರ ಕುಂದು ಕೊರತೆಯನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಹಳೆಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾದ ಸುರೇಶ್ ರವರು ಮಾತನಾಡಿ ಜಲ ಜೀವನ್ ಮಿಷನ್ ಯೊಜನೆಯಿಂದ ಗ್ರಾಮೀಣ ಭಾಗದ ಜನರ ನೀರಿನ ಭರ ನೀಗಿದಂತಾಗಿದೆ. ಪ್ರತಿಯೊಬ್ಬರಿಗೂ ಶುದ್ದ ನೀರು ಕುಡಿಯುವುದರಿಂದ ಜನರ ಆರೋಗ್ಯ ಸುಧಾರಣೆಯಾಗುತ್ತದೆ. ಈ ಯೋಜನೆಯು ಗ್ರಾಪಂ ಎಲ್ಲಾ ಗ್ರಾಮಗಳಲ್ಲಿ ಯೋಜನೆಯು ಅನುಷ್ಠಾನಗೊಂಡಿರುವ ಕುರಿತು ತಿಳಿಸಿದರು.

ಗ್ರಾಪಂ ಅಧ್ಯಕ್ಷರಾದ ಸೂರ್ಯಕುಮಾರ್ ಉಪಾಧ್ಯಕ್ಷರಾದ ಚನ್ನಮ್ಮ ಹಾಗೂ ದೇವಾಲಯ ಪ್ರಧಾನ ಅರ್ಚಕರಾದ ಜನಾರ್ಧನ್ ಪೂಜಾರಿ ಗ್ರಾಪಂ ಎಲ್ಲಾ ಗ್ರಾಮಗಳ ಚುನಾಯಿತ ಜನಪ್ರತಿನಿದಿಗಳು ಗ್ರಾಪಂ ಸಿಬ್ಬಂದಿಗಳು ಗ್ರಾಮಸ್ಥರು ಹಾಜರಿದ್ದರು. ಎಲ್ಲರಿಗೂ ಸಿಹಿ ವಿತರಿಲಾಯಿತು.

ಹೊಳೆನರಸೀಪುರ ತಾಲ್ಲೂಕು ಸಮುದಾಯ ಸಂಘಟಕರಾದ ಅರುಣ್ ಮಹೇಂದ್ರ ಹಾಗೂ ಶಾಂತರಾಜು ಕಾರ್ಯಕ್ರಮ ನೇತ್ರತ್ವ ವಹಿಸಿದರು.

Gayathri SG

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

31 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

34 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

57 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago