Categories: ಹಾಸನ

ಹೊಳೆನರಸೀಪುರ; ೧೮೦ ಕೋಟಿ ರೂಪಾಯಿಗಳ ಯೋಜನೆಯ ಅನುಷ್ಠಾನಕ್ಕೆ ಸಂಕಲ್ಪ

ಹೊಳೆನರಸೀಪುರ; ಪಟ್ಟಣದ ಸಮಗ್ರ ಯು.ಜಿ.ಡಿ. ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಶಾಸಕ ಹೆಚ್.ಡಿ.ರೇವಣ್ಣನವರ ಪರಿಶ್ರಮದಿಂದ ತರಲಾಗಿರುವ ೧೮೦ ಕೋಟಿ ರೂಪಾಯಿಗಳ ಯೋಜನೆಯನ್ನು ಆದಷ್ಟು ಬೇಗ ಜಾರಿಗೊಳಿಸಲಾಗುತ್ತದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣನವರು ತಿಳಿಸಿದರು.

ಅವರು ಇಂದು ಪಟ್ಟಣದ ೧೭ ನೇ ವಾರ್ಡಿನಲ್ಲಿ ಪುರಸಭೆವತಿಯಿಂದ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ತಾವು ಇತ್ತೀಚಿನ ಕೆಲವು ದಿನಗಳಿಂದ ಪಟ್ಟಣದ ಎಲ್ಲಾ ೨೩ ವಾರ್ಡ್‌ಗಳಿಗೆ ಪುರಸಭಾ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಪಟ್ಟಣದ ಜ್ವಲಂತ ಸಮಸ್ಯೆಗಳನ್ನು ಸಾರ್ವಜನಿಕರಿಂದ ತಿಳಿದು ಸಮಸ್ಯೆಗಳಿಗೆ ಕ್ಷಿಪ್ರವಾಗಿ ಪರಿಹಾರವನ್ನು ಸೂಚಿಸಲು ಕ್ರಮವನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಪಟ್ಟಣದಲ್ಲಿ ಪ್ರಸ್ತುತ ಯು.ಜಿ.ಡಿ, ರಸ್ತೆ, ಚರಂಡಿ, ಬೀದಿ ದೀಪ,ವಸತಿ ಸಮಸ್ಯೆ,ಸ್ವಚ್ಛತೆ ಪರಿಸರ ಸಂರಕ್ಷಣೆಗೆ ಸಂಭಂದಿಸಿದಂತೆ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಪುರಸಭಾ ವ್ಯಾಪ್ತಿಯ ಯು.ಜಿ.ಡಿ. ಲೈನ್ ಗಳು ಅಳವಡಿಸಿ ಸುಮಾರು ಮೂವತ್ತರಿಂದ ನಲವತ್ತು ವರ್ಷಗಳು ಆಗಿದ್ದು, ಜನ ಸಂಖ್ಯೆಯು ಈಗ ಹೆಚ್ಚಾಗಿದ್ದು, ಹಳೆಯ ಯು.ಜಿ.ಡಿ.ಲೈನ್‌ಗಳ ಒಳಚರಂಡಿಯಲ್ಲಿ ಕೊಳಚೆಯು ಸರಾಗವಾಗಿ ಹರಿಯಲು ಸಮಸ್ಯೆ ಎದುರಾಗುತ್ತಿದೆ, ಇದನ್ನು ಮನಗಂಡು ಶಾಸಕರು ೧೮೦ ಕೋಟಿ ರೂಪಾಯಿಗಳ ಸಮಗ್ರ ಯು.ಜಿ.ಡಿ. ಲೈನ್‌ಗಳನ್ನು ಹೊಸದಾಗಿ ಅಳವಡಿಸಲು ಕಾರ್ಯಯೋಜನೆಯನ್ನು ರೂಪಿಸಲಾಗಿದ್ದು, ಅನುಷ್ಠಾನಗೊಳಿಸಲು ಸಂಕಲ್ಪವನ್ನು ಮಾಡಲಾಗಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷೆ ಎನ್.ಜ್ಯೋತಿಮಂಜುನಾಥ್, ಪುರಸಭಾ ಸದಸ್ಯೆ ನಾಗಮಣಿ, ಪುರಸಭೆ ಅಧಿಕಾರಿಗಳಾದ ರಮೇಶ್,ಪರಿಸರ ಇಂಜಿನಿಯರ್ ರುಚಿದರ್ಶಿನಿ,ಆರೋಗ್ಯ ನಿರೀಕ್ಷಕ ವಸಂತ್‌ಕುಮಾರ್ ಇನ್ನಿತರರಿದ್ದರು.

Sneha Gowda

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

7 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

17 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

36 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

47 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago