Categories: ಹಾಸನ

ನಾನು ಸೋತು ಗೆದ್ದಿದ್ದೇನೆ, ರೇವಣ್ಣ ಗೆದ್ದು ಸೋತಿದ್ದಾರೆ- ಶ್ರೇಯಸ್ ಪಟೇಲ್

ಹಾಸನ: ಹಾಸನದ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಟಕ್ಕರ್ ಕೊಟ್ಟ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದಡಿ ಇಂದು ರೇವಣ್ಣ ಶಾಸಕರಾಗಿರಬಹುದು. ಆದರೆ ಹೊಳೆನರಸೀಪುರದ ಜನಕ್ಕೆ ನಾನೇ ಶಾಸಕ. ೫೦ ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ ಎಂದಿದ್ದೆ ಆದರೆ ಸಾಧ್ಯವಾಗಿಲ್ಲ. ೨೦೨೮ ರ ಚುನಾವಣೆಗೆ ನಾನು ನಾಳೆಯಿಂದಲೇ ಸಿದ್ಧನಾಗುತ್ತೇನೆ. ಜನತೆ ಜೊತೆ ಇದ್ದು ಕಷ್ಟ ಸುಖಕ್ಕೆ ಸ್ಪಂದಿಸುತ್ತೇನೆ. ನಾನು ಸೋತಿರಬಹುದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಡವರಿಗೆ ಏನು ತಲುಪಬೇಕೋ ಅದನ್ನ ತಲುಪಿಸುತ್ತೇನೆ ಎಂದು ಶ್ರೇಯಸ್ ಪಟೇಲ್ ಹೇಳಿದ್ದಾರೆ.

ರಾಜ್ಯದ ಜನ ನೋಡುವಂತೆ ಹೊಳೆನರಸೀಪುರದ ಜನ ನನಗೆ ಮತ ನೀಡಿದ್ದಾರೆ. ಹಣದ ಹೊಳೆ ಹರಿಸಿ ಹೆಂಡ, ಖಂಡದ ಆಸೆ ತೋರಿಸಿದರೂ ಜನ ನಮಗೆ ಮತ ನೀಡಿದ್ದಾರೆ. ಅವರು ಹಣದಿಂದ ಗೆದ್ದಿದ್ದಾರೆ ಹೊರತು ಪ್ರೀತಿ ವಿಶ್ವಾಸ ಅಭಿವೃದ್ಧಿಯಿಂದ ಗೆದ್ದಿಲ್ಲ. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಅಧಿಕಾರಕ್ಕೆ ತರುತ್ತೇವೆ.

ನಾನು ಸೋತಿದ್ದೇನೆ ಎಂದು ಕುಗ್ಗುವುದಿಲ್ಲ, ಬೇಜಾರು ಇಲ್ಲ. ನಮ್ಮ ತಾಲೂಕಿನ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಂದೆ ಸರಿಯಾದ ರೀತಿಯಲ್ಲಿ ಕೆಲಸ ಮಾಡಿ. ನಾನು ಸೋತು ಗೆದ್ದಿದ್ದೇನೆ ರೇವಣ್ಣ ಗೆದ್ದು ಸೋತಿದ್ದಾರೆ ಎಂದು ಶ್ರೇಯಸ್ ಲೇವಡಿ ಮಾಡಿದ್ದಾರೆ.

Gayathri SG

Recent Posts

ನೌಕಾಪಡೆಯ ಮುಖ್ಯಸ್ಥರಾಗಿ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅಧಿಕಾರ ಸ್ವೀಕಾರ

ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. 1964ರ ಮೇ 15ರಂದು ಜನಿಸಿದ…

6 mins ago

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ

ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು…

20 mins ago

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

52 mins ago

ಹೆಬ್ರಿ ಅಡಾಲ್ ಬೆಟ್ಟು ಪರಿಸರದ ಚರಂಡಿಯಲ್ಲಿ ಕೊಳಚೆ ನೀರು : ಗ್ರಾಮಸ್ಥರ ಆಕ್ರೋಶ

ಹೆಬ್ರಿ ಅಡಾಲ್ ಬೆಟ್ಟು ಶಿಶುಮಂದಿರದ ಸಮೀಪ ಇರುವ ಪರಿಸರದಲ್ಲಿ ಹಾದುಹೋದ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ನಾಥ ಬೀರುತ್ತಿದ್ದು ಸಾಂಕ್ರಾಮಿಕ…

1 hour ago

ವಿಕಸಿತ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ : ಶಿವರುದ್ರ ಬಾಗಲಕೋಟ ಮನವಿ

ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ…

1 hour ago

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದ 15 ಆಟಗಾರರ ಬಲಿಷ್ಠ ತಂಡ ಪ್ರಕಟ

2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ…

1 hour ago